ಮೈಸೂರು

ಸಿ.ಟಿ ರವಿಗೆ ಬಿಕೆ ಹರಿಪ್ರಸಾದ್ ಸವಾಲು

ಮೈಸೂರು: 15 ದಿನಗಳ ಕಾಲ ಸಮಯ ಕೊಡುತ್ತೇನೆ, ತಾಕತ್ತು, ಧಮ್ ಇದ್ರೆ ನನ್ನ ವಿರುದ್ಧ ಐಟಿ, ಇಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಕೋತ್ವಾಲ್ ನ ಮೂಲವೇ ಚಿಕ್ಕಮಗಳೂರು, ಸಿ.ಟಿ ರವಿ ಕೋತ್ವಾಲ್ ನ ಸಂತತಿ.,ನಾನು ಗ್ರಾಮ ಪಂಚಾಯಿತಿ ಚುನಾವಣೆ ನಿಂತು ಗೆದ್ದಿಲ್ಲ ನಿಜಾ. ವಿಶ್ವಗುರು ಮೋದಿ ಯಾವ ಚುನಾವಣೆ ಗೆದ್ದು ಗುಜರಾತ್ ನ ಸಿಎಂ ಆಗಿದ್ದು? ಸಿಟಿ ರವಿ ಹಾಗೆ ನಾನು ಜಾತಿ, ಹಣ ಬಲದಿಂದ ಚುನಾವಣೆ ಎದುರಿಸುವ ಕ್ರಿಮಿನಲ್ ಅಲ್ಲ ಎಂದು ಸಿಟಿ ರವಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನನ್ನ ಜೀವನದಲ್ಲಿ ಎಲ್ಲಾದ್ರೂ ಎಫ್ ಐ ಆರ್ ಆಗಿದ್ರೆ , ನಾನು ನನ್ನ ರಾಜಕೀಯ ಜೀವನವನ್ನೇ ಬಿಡ್ತೇನೆ. ಸಿಟಿ ರವಿ ಕೋಟ್ಯಾಧೀಶ, ಸಿ ಟಿ ರವಿ ಎಂ ಎಲ್ ಎ ಆದಾಗ ಎಷ್ಟು ದುಡ್ಡು ಇತ್ತು, ಇವಾಗ ಎಷ್ಟಿದೆ ಅಂತ ಲೆಕ್ಕ ಕೊಡ್ಲಿ ಎಂದು ಸವಾಲು ಹಾಕಿದರು.ಸಿ ಟಿ ರವಿ ಆಲ್ದಳ್ಳಿಯಿಂದ ಬಂದವರು. ಅವರು, ರಸ್ತೆ ಮೇಲೆ ಲಿಫ್ಟ್ ಗಾಗಿ ಕಾಯ್ತಿದ್ದ‌ ಕಾಲದಲ್ಲೇ ನನ್ನ ಬಳಿ ಸ್ಕೂಟರ್ ಇತ್ತು. ಅವರ ಭಾಷೆ ಅವರ ವ್ಯಕ್ತಿತ್ವವನ್ನು ತೋರಿಸುತ್ತೆ. ಕುಡಿದ ನಶೆಯಲ್ಲಿ ಕಾರ್ ಓಡಿಸಿ ಅಮಾಯಕ ಜನರನ್ನು ಕೊಂದವನಲ್ಲ ನಾನು. ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಏನು ಅಂತಾ ತುಂಬಾ ಚೆನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

andolana

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

1 hour ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

2 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

3 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago