ಮೈಸೂರು

ಮುಡಾ ಹಗರಣ: ರಾಜ್ಯಪಾಲರ ನಡೆ ವಿರೋಧಿಸಿ ಮೈಸೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್‌ ಕ್ರಮವನ್ನು ಖಂಡಿಸಿ ಸಿಎಂ ತವರಲ್ಲಿ ಕಾಂಗ್ರಸ್‌ ಬೃಹತ್‌ ಪ್ರತಿಭಟನೆ ನಡೆಸುತ್ತಿದೆ.

ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನಾ ಸಮಾವೇಶದಲ್ಲಿ ಸೇರಿದ್ದ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ, ಬಿಜೆಪಿ ಅವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ರಾಜ್ಯಪಾಲರನ್ನು ಬಳಸಿಕೊಂಡು ರಾಜಕೀಯ ಪಿತೂರಿಯ ಮೂಲಕ ಆಡಳಿತ ಪಕ್ಷವನ್ನು ನೆಲಸಮಗೊಳಿಸುವ ಷಡ್ಯಂತರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ರಾಜಭವನವನ್ನು ರಾಜಕೀಯ ಅಂಗಳವನ್ನಾಗಿ ಮಾಡಲಾಗಿದೆ ಎಂದು ಕಿಡಿಕಾರಿದರು.

ಶಾಸಕರಾದ ತನ್ವೀರ್‌ ಸೇಠ್‌, ಕೆ.ಹರೀಶ್‌ ಗೌಡ, ರವಿಶಂಕರ್‌, ದರ್ಶನ್‌ ಧ್ರುವನಾರಾಯಣ್‌, ಅನಿಲ್‌ ಚಿಕ್ಕಮಾದು, ಎಂಎಲ್‌ಸಿ ಡಿ.ತಿಮ್ಮಯ್ಯ, ಉಮಾಶ್ರೀ, ಗ್ಯಾರೆಂಟಿ ಯೋಜನಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್‌, ಎಂ. ಲಕ್ಷ್ಮಣ್‌, ಕಾಂಗ್ರೆಸ್‌ ಜಿಲ್ಲಾ ಗ್ರಾಮಾಂತರ ಸಮಿತಿ ಅಧ್ಯಕ್ಷ ಬಿ.ಜೆ ವಿಜಯ್‌ಕುಮಾರ್‌, ಮುಡಾ ಅಧ್ಯಕ್ಷ ಮರಿಗೌಡ, ಆಯೂಬ್‌ ಖಾನ್‌, ಎಂ.ಕೆ ಸೋಮಶೇಖರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

51 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

1 hour ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

2 hours ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

2 hours ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

2 hours ago