ಮೈಸೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಕ್ರಮವನ್ನು ಖಂಡಿಸಿ ಸಿಎಂ ತವರಲ್ಲಿ ಕಾಂಗ್ರಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನಾ ಸಮಾವೇಶದಲ್ಲಿ ಸೇರಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿ ಮಹದೇವಪ್ಪ, ಬಿಜೆಪಿ ಅವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ರಾಜ್ಯಪಾಲರನ್ನು ಬಳಸಿಕೊಂಡು ರಾಜಕೀಯ ಪಿತೂರಿಯ ಮೂಲಕ ಆಡಳಿತ ಪಕ್ಷವನ್ನು ನೆಲಸಮಗೊಳಿಸುವ ಷಡ್ಯಂತರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ರಾಜಭವನವನ್ನು ರಾಜಕೀಯ ಅಂಗಳವನ್ನಾಗಿ ಮಾಡಲಾಗಿದೆ ಎಂದು ಕಿಡಿಕಾರಿದರು.
ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ಎಂಎಲ್ಸಿ ಡಿ.ತಿಮ್ಮಯ್ಯ, ಉಮಾಶ್ರೀ, ಗ್ಯಾರೆಂಟಿ ಯೋಜನಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಎಂ. ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಸಮಿತಿ ಅಧ್ಯಕ್ಷ ಬಿ.ಜೆ ವಿಜಯ್ಕುಮಾರ್, ಮುಡಾ ಅಧ್ಯಕ್ಷ ಮರಿಗೌಡ, ಆಯೂಬ್ ಖಾನ್, ಎಂ.ಕೆ ಸೋಮಶೇಖರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…