ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಯಿಸಿ ಹಿಂದೂ ಧರ್ಮದ ಹೆಸರಿನಲ್ಲಿ, ಧರ್ಮ ಸಂಸತ್ ಸ್ಥಾಪಿಸಿ ಅದರ ಮೇಲೆ ಹಿಡಿತ ಸಾಧಿಸುವುದು ಬಿಜೆಪಿ ಹಾಗೂ ಆರ್ಎಸ್ಎಸ್ ಗುರಿಯಾಗಿದೆ.
ಹೀಗಾಗಿ ಸುಮಾರು ೪೦೦ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಅಪಾರ ಅಕ್ರಮ ಹಣವನ್ನು ಸಂಗ್ರಹಿಸಿಕೊಂಡಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುವುದರೊಡನೆ ಇಡಿ, ಐಟಿ, ಸಿಬಿಐ ದಾಳಿಗಳ ಮೂಲಕ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದ ದುಡಿಯುವ ಜನರು, ದಮನಿತ ಸಮುದಾಯಗಳು, ಅಲ್ಪಸಂಖ್ಯಾತರು, ಪ್ರಜ್ಞಾವಂತರು ಒಂದಾಗುವ ಮೂಲಕ ಷಡ್ಯಂತ್ರ ವಿಫಲಗೊಳಿಸಲು ಶ್ರಮಿಸುತ್ತಿದ್ದಾರೆ.
ಹೀಗಾಗಿ ಕಾಂಗ್ರೆಸ್ ವಿರುದ್ಧದ ನಿಸ್ತೇಜ ಮಾತುಗಳನ್ನು ತಿರಸ್ಕರಿಸುವ ಮೂಲಕ ಅದಕ್ಕೆ ಬೆಂಬಲ ನೀಡಬೇಕು. ಈ ಮೂಲಕ ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ಇನ್ನು, ರಾಜ್ಯದಲ್ಲಿ ದಲಿತ ಸಿಎಂ ವಿಷಯ ಈ ಸಂದರ್ಭದಲ್ಲಿ ಪ್ರಸ್ತುತವಲ್ಲ ಎಂದರು.
ಪದಾಧಿಕಾರಿಗಳಾದ ವಸಂತ್, ಪ್ರಶಾಂತ್, ರವಿ, ವಿನೋದ್ ಚಾಕೋ, ಉಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…