ಮೈಸೂರು

ರಾಜ್ಯದ ಖಜಾನೆಯನ್ನು ಕಾಂಗ್ರೆಸ್‌ ಲೂಟಿ ಮಾಡಿದೆ: ಎಚ್‌ಡಿಕೆ ಆರೋಪ

ಮೈಸೂರು: ರಾಜ್ಯ ಸರ್ಕಾರದ ಖಜಾನೆಯನ್ನು ಆಡಳಿತ ಕಾಂಗ್ರೆಸ್‌ ಪಕ್ಷ ಲೂಟಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನತೆಯ ಮೇಲೆ ಬರೆ ಬೀಳಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಸೋಮವಾರ (ಏ.೨೨) ಹೇಳಿದ್ದಾರೆ.

ಸಾಲಿಗ್ರಾಮದಲ್ಲಿನ ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ಕಾಂಗ್ರೆಸ್‌ ಗ್ಯಾರೆಂಟಿಗಳಿಂದ ಮಹಿಳೆಯರು ಮುಂದಿನ ದಿನಗಳಲ್ಲಿ ಅನಾಹುತಕ್ಕೆ ಒಳಗಾಗಲಿದ್ದಾರೆ. ಸರ್ಕಾರ ಈ ಎಲ್ಲಾ ಕಾರ್ಯಕ್ರಮಗಳಿಗೆ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡುತ್ತಿದೆ. ಆ ಮೂಲಕ ಗ್ಯಾರೆಂಟಿ ಹೆಸರನ್ನು ಬಳಸಿಕೊಂಡು ಜನರ ಮೇಲೆ ಸಾಲ ಹೊರಿಸಲಾಗುತ್ತಿದೆ ಎಂದು ದೂರಿದರು.

ಈ ಎಲ್ಲಾ ಸಾಲಗಳನ್ನು ತೀರಿಸಲು ಸರ್ಕಾರ ಎಲ್ಲಾ ಹೊರೆಗಳನ್ನು ತೆರಿಗೆಗಳ ಮೂಲಕ ಜನರ ಮೇಲೆ ಹಾಕಲಿದ್ದಾರೆ. ಆಡಳಿತ ಸರ್ಕಾರ ಮಾಡುತ್ತಿರುವ ಸಾಲವನ್ನು ಮುಂಬರುವ ಯಾವುದೇ ಸರ್ಕಾರಗಳು ತೀರಿಸಲು ಸಾಧ್ಯವಾಗದ ಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ತಳ್ಳುತ್ತಿದೆ ಎಂದು ದೂರಿದರು.

ಈಗಾಗಲೇ ರಾಜ್ಯದ ಪ್ರತಿಯೊಬ್ಬರ ಮೇಲೆ 36 ಸಾವಿರ ಸಾಲವಿದೆ. ಇದು ಮುಂದಿನ ಐದು ವರ್ಷಗಳ ಕಾಲ ಎಷ್ಟಾಗಲಿದೆ ಎಂಬುದನ್ನು ಜನರು ಯೋಚಿಸಬೇಕು. ಈ ಬಾರಿ ಯೋಚಿಸಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಮಹಿಳೆಯರು, ಪ್ರಜೆಗಳು ಕಾಂಗ್ರೆಸ್‌ ಗ್ಯಾರೆಂಟಿಗಳಿಗೆ ಬಲಿಯಾಗಬಾರದು, ಬದಲಾಗಿ ಅಗತ್ಯವಾಗಿ ಬೇಕಿರುವ ಉಚಿತ ಶಿಕ್ಷಣ, ಉದ್ಯೋಗ, ಆರೋಗ್ಯ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕಲ್ಲಿ ಮುಂದಿನ ದಿನಗಳಲ್ಲಿ ಯಾರ ಮುಂದೆಯೂ ಕೈಯೊಡ್ಡಿ ನಿಲ್ಲುವ ಸ್ಥಿತಿಗೆ ತಲುಪಲಾರಿರಿ ಎಂದು ಎಚ್ಚರಿಸಿದರು.

ಇನ್ನು ಎನ್‌ಡಿಎ ಅಧಿಕಾರಕ್ಕೆ ಬಂದರೇ ರಾಜ್ಯ ಕೇಳುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಿಜೆಪಿ ಬೆಂಬಲ ನೀಡಲಿದೆ. ಪ್ರಧಾನಿ ಮೋದಿ ಅವರಿಗೆ ದೇವೆಗೌಡರನ್ನು ಕಂಡರೆ ಅಪಾರ ಗೌರವವಿದೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

1 hour ago

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

1 hour ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

1 hour ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

1 hour ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

1 hour ago