ಮೈಸೂರು: ರಾಜ್ಯ ಸರ್ಕಾರದ ಖಜಾನೆಯನ್ನು ಆಡಳಿತ ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನತೆಯ ಮೇಲೆ ಬರೆ ಬೀಳಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಸೋಮವಾರ (ಏ.೨೨) ಹೇಳಿದ್ದಾರೆ.
ಸಾಲಿಗ್ರಾಮದಲ್ಲಿನ ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ಕಾಂಗ್ರೆಸ್ ಗ್ಯಾರೆಂಟಿಗಳಿಂದ ಮಹಿಳೆಯರು ಮುಂದಿನ ದಿನಗಳಲ್ಲಿ ಅನಾಹುತಕ್ಕೆ ಒಳಗಾಗಲಿದ್ದಾರೆ. ಸರ್ಕಾರ ಈ ಎಲ್ಲಾ ಕಾರ್ಯಕ್ರಮಗಳಿಗೆ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡುತ್ತಿದೆ. ಆ ಮೂಲಕ ಗ್ಯಾರೆಂಟಿ ಹೆಸರನ್ನು ಬಳಸಿಕೊಂಡು ಜನರ ಮೇಲೆ ಸಾಲ ಹೊರಿಸಲಾಗುತ್ತಿದೆ ಎಂದು ದೂರಿದರು.
ಈ ಎಲ್ಲಾ ಸಾಲಗಳನ್ನು ತೀರಿಸಲು ಸರ್ಕಾರ ಎಲ್ಲಾ ಹೊರೆಗಳನ್ನು ತೆರಿಗೆಗಳ ಮೂಲಕ ಜನರ ಮೇಲೆ ಹಾಕಲಿದ್ದಾರೆ. ಆಡಳಿತ ಸರ್ಕಾರ ಮಾಡುತ್ತಿರುವ ಸಾಲವನ್ನು ಮುಂಬರುವ ಯಾವುದೇ ಸರ್ಕಾರಗಳು ತೀರಿಸಲು ಸಾಧ್ಯವಾಗದ ಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್ ತಳ್ಳುತ್ತಿದೆ ಎಂದು ದೂರಿದರು.
ಈಗಾಗಲೇ ರಾಜ್ಯದ ಪ್ರತಿಯೊಬ್ಬರ ಮೇಲೆ 36 ಸಾವಿರ ಸಾಲವಿದೆ. ಇದು ಮುಂದಿನ ಐದು ವರ್ಷಗಳ ಕಾಲ ಎಷ್ಟಾಗಲಿದೆ ಎಂಬುದನ್ನು ಜನರು ಯೋಚಿಸಬೇಕು. ಈ ಬಾರಿ ಯೋಚಿಸಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರು, ಪ್ರಜೆಗಳು ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಬಲಿಯಾಗಬಾರದು, ಬದಲಾಗಿ ಅಗತ್ಯವಾಗಿ ಬೇಕಿರುವ ಉಚಿತ ಶಿಕ್ಷಣ, ಉದ್ಯೋಗ, ಆರೋಗ್ಯ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕಲ್ಲಿ ಮುಂದಿನ ದಿನಗಳಲ್ಲಿ ಯಾರ ಮುಂದೆಯೂ ಕೈಯೊಡ್ಡಿ ನಿಲ್ಲುವ ಸ್ಥಿತಿಗೆ ತಲುಪಲಾರಿರಿ ಎಂದು ಎಚ್ಚರಿಸಿದರು.
ಇನ್ನು ಎನ್ಡಿಎ ಅಧಿಕಾರಕ್ಕೆ ಬಂದರೇ ರಾಜ್ಯ ಕೇಳುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಿಜೆಪಿ ಬೆಂಬಲ ನೀಡಲಿದೆ. ಪ್ರಧಾನಿ ಮೋದಿ ಅವರಿಗೆ ದೇವೆಗೌಡರನ್ನು ಕಂಡರೆ ಅಪಾರ ಗೌರವವಿದೆ ಎಂದು ತಿಳಿಸಿದರು.
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…