ಮೈಸೂರು: ರಾಜ್ಯ ಸರ್ಕಾರದ ಖಜಾನೆಯನ್ನು ಆಡಳಿತ ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನತೆಯ ಮೇಲೆ ಬರೆ ಬೀಳಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಸೋಮವಾರ (ಏ.೨೨) ಹೇಳಿದ್ದಾರೆ.
ಸಾಲಿಗ್ರಾಮದಲ್ಲಿನ ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ಕಾಂಗ್ರೆಸ್ ಗ್ಯಾರೆಂಟಿಗಳಿಂದ ಮಹಿಳೆಯರು ಮುಂದಿನ ದಿನಗಳಲ್ಲಿ ಅನಾಹುತಕ್ಕೆ ಒಳಗಾಗಲಿದ್ದಾರೆ. ಸರ್ಕಾರ ಈ ಎಲ್ಲಾ ಕಾರ್ಯಕ್ರಮಗಳಿಗೆ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡುತ್ತಿದೆ. ಆ ಮೂಲಕ ಗ್ಯಾರೆಂಟಿ ಹೆಸರನ್ನು ಬಳಸಿಕೊಂಡು ಜನರ ಮೇಲೆ ಸಾಲ ಹೊರಿಸಲಾಗುತ್ತಿದೆ ಎಂದು ದೂರಿದರು.
ಈ ಎಲ್ಲಾ ಸಾಲಗಳನ್ನು ತೀರಿಸಲು ಸರ್ಕಾರ ಎಲ್ಲಾ ಹೊರೆಗಳನ್ನು ತೆರಿಗೆಗಳ ಮೂಲಕ ಜನರ ಮೇಲೆ ಹಾಕಲಿದ್ದಾರೆ. ಆಡಳಿತ ಸರ್ಕಾರ ಮಾಡುತ್ತಿರುವ ಸಾಲವನ್ನು ಮುಂಬರುವ ಯಾವುದೇ ಸರ್ಕಾರಗಳು ತೀರಿಸಲು ಸಾಧ್ಯವಾಗದ ಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್ ತಳ್ಳುತ್ತಿದೆ ಎಂದು ದೂರಿದರು.
ಈಗಾಗಲೇ ರಾಜ್ಯದ ಪ್ರತಿಯೊಬ್ಬರ ಮೇಲೆ 36 ಸಾವಿರ ಸಾಲವಿದೆ. ಇದು ಮುಂದಿನ ಐದು ವರ್ಷಗಳ ಕಾಲ ಎಷ್ಟಾಗಲಿದೆ ಎಂಬುದನ್ನು ಜನರು ಯೋಚಿಸಬೇಕು. ಈ ಬಾರಿ ಯೋಚಿಸಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರು, ಪ್ರಜೆಗಳು ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಬಲಿಯಾಗಬಾರದು, ಬದಲಾಗಿ ಅಗತ್ಯವಾಗಿ ಬೇಕಿರುವ ಉಚಿತ ಶಿಕ್ಷಣ, ಉದ್ಯೋಗ, ಆರೋಗ್ಯ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕಲ್ಲಿ ಮುಂದಿನ ದಿನಗಳಲ್ಲಿ ಯಾರ ಮುಂದೆಯೂ ಕೈಯೊಡ್ಡಿ ನಿಲ್ಲುವ ಸ್ಥಿತಿಗೆ ತಲುಪಲಾರಿರಿ ಎಂದು ಎಚ್ಚರಿಸಿದರು.
ಇನ್ನು ಎನ್ಡಿಎ ಅಧಿಕಾರಕ್ಕೆ ಬಂದರೇ ರಾಜ್ಯ ಕೇಳುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಿಜೆಪಿ ಬೆಂಬಲ ನೀಡಲಿದೆ. ಪ್ರಧಾನಿ ಮೋದಿ ಅವರಿಗೆ ದೇವೆಗೌಡರನ್ನು ಕಂಡರೆ ಅಪಾರ ಗೌರವವಿದೆ ಎಂದು ತಿಳಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…