ಮೈಸೂರು

ದಲಿತರ ಜಮೀನು ಕಬಳಿಸಲು ಸಂಚು : ದಸಂಸ ಆರೋಪ

ಹುಣಸೂರು : ತಾಲ್ಲೂಕಿನ ಬಿಳಿಕೆರೆ ಹೋಬಳಿ, ಕಾಡುವಡ್ಡರಗುಡಿ ದೊಡ್ಡಕೊಪ್ಪಲು ಗ್ರಾಮದ ವೆಂಕಟರತ್ನ ಎಂಬವರ ಜಮೀನನ್ನು ಸವರ್ಣಿಯರ ಗುಂಪೊಂದು ಕಬಳಿಸಲು ಸಂಚು ರೂಪಿಸುತ್ತಿದೆ ಎಂದು ದಸಂಸ ಆರೋಪಿಸಿದೆ.

ಈ ಸಂಬಂಧ ದಸಂಸ ನಿಯೋಗವು ಬುಧವಾರ ಕಾಡುವಡ್ಡರಗುಡಿ ದೊಡ್ಡಕೊಪ್ಪಲು ಗ್ರಾಮದ ದಲಿತ ವೆಂಕಟರತ್ನ ರವರ ನಿವಾಸಕ್ಕೆ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿತು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ನಿಂಗರಾಜ್ ಮಲ್ಲಾಡಿ ಮಾತನಾಡಿ, ಹೆಚ್.ಡಿ.ಕೋಟೆ ತಾಲ್ಲೂಕಿನ ಪಡುಕೋಟೆ ಕಾವಲ್ ಸರ್ವೆ ನಂಬರ್ ೧ರಲ್ಲಿ ೧.೧೦ ಗುಂಟೆ ವಿಸ್ತೀರ್ಣದ ಜಮೀನನ್ನು ೧೫ ವರ್ಷಗಳಿಂದಲೂ ಉಳುಮೆ ಮಾಡಿಕೊಂಡು ಸಾಗುವಳಿಗಾಗಿ ಫಾರಂ ನಂಬರ್ ೫೩ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಮಂಜೂರಾಗುವ ಹಂತದಲ್ಲಿದೆ. ಈ ಜಮೀನಿನಲ್ಲಿ ಪತ್ನಿ ಲಕ್ಷ್ಮಮ್ಮ ಅವರೊಂದಿಗೆ ವೆಂಕಟರತ್ನ ವಾಸವಾಗಿದ್ದಾರೆ. ಆದರೆ ತರಿಕಲ್ ದೊಡ್ಡಕೊಪ್ಪಲು ಗ್ರಾಮದ ಕೆಂಡಗಣ್ಣೇಗೌಡ, ರಘು ಎಂಬವರು ಇವರ ಜಮೀನನ್ನು ಕಬಳಿಸಲು ಹಾಗೂ ಈ ದಲಿತ ಕುಟುಂಬವನ್ನು ಒಕ್ಕಲೆಬ್ಬಿಸಲು ಹಲವು ದಿನಗಳಿಂದ ಭಯ ಹುಟ್ಟಿಸಿ ಸಂಚು ರೂಪಿಸಿದ್ದಾರೆ. ಈ ವಿಷಯವು ದಸಂಸ ಗಮನಕ್ಕೆ ಬಂದು ಕಂದಾಯ ಇಲಾಖೆ, ಪೊಲೀಸ್ ಇಲಾಖೆಗೆ ವೆಂಕಟರತ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ದಲಿತ ಕುಟುಂಬಕ್ಕೆ ನಿರಂತರವಾಗಿ ಬೆದರಿಕೆ ನೀಡುತ್ತಾ ಕಿರುಕುಳ ಕೊಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ನೊಂದ ದಲಿತ ವೆಂಕಟರತ್ನನ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ದಸಂಸ ಹಿರಿಯ ಮುಖಂಡ ಬಸವಲಿಂಗಯ್ಯ, ದೇವೇಂದ್ರ ಕುಳುವಾಡಿ, ನಿವೃತ್ತ ಪ್ರಾಂಶುಪಾಲ ವೆಂಕಟೇಶಯ್ಯ, ದೊಡ್ಡಕೊಪ್ಪಲು ಗ್ರಾಮದ ಎಲ್. ಐ.ಸಿ ಸ್ವಾಮಿ, ಬಸಪ್ಪನ ಸ್ವಾಮಿ, ತ್ಯಾಗರಾಜು, ರಾಮೇಗೌಡ, ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

21 mins ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

24 mins ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

29 mins ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

1 hour ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

1 hour ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

2 hours ago