ಅರ್ಜಿ ಸಲ್ಲಿಕೆ ದಿನಾಂಕ ನ.31 ರವರೆಗೆ ವಿಸ್ತರಣೆ
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿ ಎರಡು ವರ್ಷಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 5,075 ಕಾನ್ಸ್ಟೇಬಲ್ ಹುದ್ದೆಗಳ ಸಿವಿಲ್-1,591 ಹಾಗೂ ಸಿಎಆರ್, ಡಿಎಆರ್-3,484 ಭರ್ತಿಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ, ಎಸ್.ಸಿ., ಎಸ್.ಟಿ. ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷಗಳು ಹಾಗೂ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿತ್ತು.
ಗರಿಷ್ಠ ವಯೋಮಿತಿ ಹೆಚ್ಚಳ ಮಾಡುವಂತೆ ಒತ್ತಾಯಿಸಿದ್ದ ಅಭ್ಯರ್ಥಿಗಳು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಗರಿಷ್ಠ ವಯೋಮಿತಿ ಯನ್ನು ಎರಡು ವರ್ಷ ಹೆಚ್ಚಳ ವಾಡಿದೆ.
ಪರಿಸ್ಕೃತ ಗರಿಷ್ಠ ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷಗಳು , ಎಸ್.ಸಿ/ಎಸ್.ಟಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 29 ವರ್ಷಗಳು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 37 ವರ್ಷಗಳು.
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31ಕೊನೆ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ನವೆಂಬರ್ 31 ಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…