ಮೈಸೂರು

ಸಂವಿಧಾನ ಬದಲಾವಣೆ ಬಿಜೆಪಿ ಹಿಡನ್‌ ಅಜೆಂಡಾ : ಸಿಎಂ ಸಿದ್ದರಾಮಯ್ಯ

ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್‌ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, ಸಮಾನ ಹಕ್ಕು ನೀಡುವ ಕಾರಣಕ್ಕಾಗೊಯೇ ಬಿಜೆಪಿ ಅವರು ಸಂವಿಧಾನವನ್ನು ಬದಲಾವಣೆ ಮಾಡುವ ಅಚಲ ನಂಬಿಕೆ ಹೊಂದಿದ್ದಾರೆ ಎಂದರು.

ಬಿಜೆಪಿ ಪಕ್ಷದ ಸಂಸದ ಅನಂತ್‌ಕುಮಾರ್‌ ಹೆಗಡೆ ಈ ಹಿಂದೆಯೂ ಒಮ್ಮ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರು. ಬಳಿಕ ಮತ್ತೆ ಕೆಲವು ದಿನಗಳ ಹಿಂದೆ ಅದೇ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿ ಪಕ್ಷ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.

ನಮಗೆ ೪೦೦ ಸ್ಥಾನ ನೀಡಿ ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಅನಂತ್‌ಕುಮಾರ್‌ ಹೇಳಿಕೆ ನೀಡಿದರೂ ಅವರನ್ನು ಪಕ್ಷದಿಂದ ಉಚ್ಚಾಟನೆ ಅಥವ ಅಮಾನತ್ತು ಮಾಡಿಲ್ಲ. ನೇರವಾಗಿ ಹೇಳಲಾಗದೇ ಅವರಿವರ ಮೂಲಕ ನರೇಂದ್ರ ಮೋದಿ, ಅಮಿತ್‌ ಶಾ ನಡ್ಡ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಾವೆಲ್ಲರೂ ಸೇರಿ ನಮ್ಮ ಸಂವಿಧಾನವನ್ನ ಉಳಿಸಿಕೊಳ್ಳಬೇಕು ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ಕರೆ ಕೊಟ್ಟರು.

andolanait

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

1 hour ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

5 hours ago