ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, ಸಮಾನ ಹಕ್ಕು ನೀಡುವ ಕಾರಣಕ್ಕಾಗೊಯೇ ಬಿಜೆಪಿ ಅವರು ಸಂವಿಧಾನವನ್ನು ಬದಲಾವಣೆ ಮಾಡುವ ಅಚಲ ನಂಬಿಕೆ ಹೊಂದಿದ್ದಾರೆ ಎಂದರು.
ಬಿಜೆಪಿ ಪಕ್ಷದ ಸಂಸದ ಅನಂತ್ಕುಮಾರ್ ಹೆಗಡೆ ಈ ಹಿಂದೆಯೂ ಒಮ್ಮ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರು. ಬಳಿಕ ಮತ್ತೆ ಕೆಲವು ದಿನಗಳ ಹಿಂದೆ ಅದೇ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿ ಪಕ್ಷ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.
ನಮಗೆ ೪೦೦ ಸ್ಥಾನ ನೀಡಿ ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಅನಂತ್ಕುಮಾರ್ ಹೇಳಿಕೆ ನೀಡಿದರೂ ಅವರನ್ನು ಪಕ್ಷದಿಂದ ಉಚ್ಚಾಟನೆ ಅಥವ ಅಮಾನತ್ತು ಮಾಡಿಲ್ಲ. ನೇರವಾಗಿ ಹೇಳಲಾಗದೇ ಅವರಿವರ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ನಡ್ಡ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಾವೆಲ್ಲರೂ ಸೇರಿ ನಮ್ಮ ಸಂವಿಧಾನವನ್ನ ಉಳಿಸಿಕೊಳ್ಳಬೇಕು ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ಕರೆ ಕೊಟ್ಟರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…