ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago