ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

2 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago