ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago