ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago