ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

3 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago