ಮೈಸೂರು

ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ : ಎಚ್.ಸಿ.ಮಹದೇವಪ್ಪ

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.

ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.

ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.

ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ‍್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.  

lokesh

Recent Posts

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

52 mins ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

1 hour ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

2 hours ago

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

3 hours ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

3 hours ago