ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. ಆಶ್ವಾಸನೆಗಳು ಸಂವಿಧಾನದ ಕಾನೂನುಗಳಲ್ಲ. ಪಠ್ಯ ಪರಿಷ್ಕರಿಸಿದ ವೇಳೆ ಅನಗತ್ಯ ವಿಚಾರ ಹಾಕಿದರೆ ಅದನ್ನು ಅಭ್ಯಸಿಸುವ ಯುವ ಸಮೂಹ ದಾರಿ ತಪ್ಪಲಿದೆ ಎಂದು ಅವರು ತಿಳಿಸಿದರು.
ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲೂ ಅವಕಾಶವಿಲ್ಲ. ಆದರೆ ಸ್ವಯಂ ಪ್ರೇರಿತ ಮತಾಂತರ ಎಲ್ಲರೂ ಹಕ್ಕು ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಗೋಹತ್ಯೆ ನಿಷೇಧ ವಿಚಾರವಾಗಿ ನಾನು ಸಿದ್ದರಾಮಯ್ಯ ದನ, ಎಮ್ಮೆಗಳ ಜತೆಗೆ ಬೆಳೆದಿದ್ದು, ಅದರ ಅರಿವು ನಮಗೂ ಹೆಚ್ಚಾಗಿ ಗೊತ್ತಿದೆ ಎಂದರು.
ಶ್ರೀರಂಗಪಟ್ಟಣದಲ್ಲಿ ಒಂದು ಕಡೆ ದೇವಾಲಯದ ಘಂಟೆ ನಾದ ಮತ್ತೊಂದು ಕಡೆ ಮಸೀದಿಯ ಪ್ರಾರ್ಥನೆ ಸದ್ದು ಎರಡು ಸೌಹಾರ್ದಯುತವಾಗಿ ನಡೆಯುತ್ತಿವೆ. ವೈವಿಧ್ಯೆತೆಯಿಂದ ಏಕತೆ ಕಾಣುವ ಸಮೃದ್ಧ ಭಾರತ ನಮ್ಮೆಲ್ಲರ ಗುರಿಯಾಗಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಿನ್ನೆಲೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಉದ್ದೇಶವಾಗಿದೆ.
ಯಾರಾದರೂ ಮಾಡಿರುವ ಅಭಿವೃದ್ಧಿ ಕೊಟ್ಟರೆ ಅವರಿಗೂ ಅದನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ. ಪ್ರಜಾಪ್ರಭುತ್ವ ಯಶಸ್ಸು ಅಡಕ ಆಗಿರುವುದೇ ಪತ್ರಿಕಾರಂಗದಲ್ಲಿ ಆಗಿದೆ.
ಹಾಸನ, ಕೊಡಗು, ಮೈಸೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದೇನೆ. ಉಡುಪಿ, ಮಂಗಳೂರು, ಬಾಗಲಕೋಟೆಯಲ್ಲೂ ಉಸ್ತುವಾರಿ ಆಗಿದ್ದೇನೆ.
ಆರೋಗ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿ ದಸರಾ ನೋಡಿಕೊಳ್ಳಲು ಹೇಳಿ ಹೋಗಿದ್ದು ಪ್ರಥಮ ದಸರಾ ಆಗಿದೆ. ನಿಜವಾದ ದಸರಾ ಆಚರಣೆ, ಸಂವಿಧಾನಕ್ಕೆ ಜೋಡಿಸಿ ಮಾಡಿದ್ದು ಮೊದಲ ಬಾರಿಯಾಗಿದೆ. ನನ್ನಲ್ಲೇ ಕೆಲಸಕ್ಕೆ ಮಂಜೂರಾತಿ ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆ ಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದೇವೆ.
ನಂಜನಗೂಡು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೈಸೂರು- ಬೆಂಗಳೂರು ರಸ್ತೆ ಆಗ ವಿಶ್ವನಾಥ್ ಅವರು ಸಂಸದರಾಗಿದ್ದರು. ಮೂಲ ಕಾರಣವೇ ಯುಪಿ ಸರ್ಕಾರ ಆಗಿದೆ. ನಾನೇ ಮಾಡಿದೇ ಗುದ್ಧಾಡುವ ಅಗತ್ಯವಿಲ್ಲ. ಎಲ್ಲದಕ್ಕೂ ದಾಖಲೆಗಳೇ ಉತ್ತರ ಕೊಡಲಿವೆ. ಮಾಡದಿದ್ದರೂ ಪ್ರಚಾರ ತೆಗೆದುಕೊಳ್ಳುವುದು ಯಾರಿಗೂ ಶೋಭೆಯಲ್ಲ. ಜಾತಿ, ಧರ್ಮದ ಹೆಸರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಅವರು ತಿಳಿಸಿದರು.
ಯರ್ಯಾರ ಕಾಲದಲ್ಲಿ ಏನೇನು ಅಭಿವೃದ್ಧಿ ಆಗಿದೆ ಎಂಬುದಕ್ಕೆ ದಾಖಲೆಗಳಿವೆ. ಸರಿ ತಪ್ಪೇನಿಲ್ಲಾ, ಅವಕಾಶ ಸಿಗಬೇಕಿದೆ. ಶೇ.90 ರಷ್ಟು ಮಂದಿ ದಲಿತರು ಮತ ಕೊಟ್ಟಿದ್ದಾರೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…