Categories: ಮೈಸೂರು

ಜನರ ದನಿಯಾಗಿರುವ ಸಂವಿಧಾನ: ಡಾ. ಪುಷ್ಪಅಮರ್ ನಾಥ್

ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರ್ ನಾಥ್ ಹೇಳಿದರು.

ಅವರು ಇಂದು(ನ.26) ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ಕಲಾ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ, “ಸಂವಿಧಾನ ದಿನ” ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ರಾಜ್ಯದಾದ್ಯಂತ ಸಂವಿಧಾನದ ಪೀಠಿಕೆಯನ್ನು ವಾಚಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶ ನಾವು ಅದರಲ್ಲಿರುವ ಪ್ರತಿಯೊಂದು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದು ಸಮಾನತೆಯ ಸಮಾಜವನ್ನು ನಿರ್ಮಿಸಲೆಂದು. ಹಾಗಾಗಿ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಸಮಾಜದಲ್ಲಿ ಶಾಂತಿಯುತವಾಗಿ ಜೀವಿಸಲು, ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ನ್ಯಾಯ ಒದಗಿಸಲು ಸಂವಿಧಾನವು ಅತ್ಯವಶ್ಯಕ. ರಾಷ್ಟ್ರದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಹಲವಾರು ಧರ್ಮಗಳ ಆಚರಣೆ ಚಾಲ್ತಿಯಲ್ಲಿದೆ ಹಾಗೂ ಪ್ರತಿಯೊಂದು ಧರ್ಮವು ತಮ್ಮದೇ ಆದ ಧರ್ಮ ಗ್ರಂಥಗಳನ್ನು ಒಳಗೊಂಡಿವೆ. ಆದರೇ ಅದನ್ನೆಲ್ಲ ಮೀರಿದ ಎಲ್ಲಾ ಧರ್ಮದವರಿಗೂ ಅನ್ವಯಿಸುವ ದೈವ ಗ್ರಂಥ ರಾಷ್ಟ್ರೀಯ ಗ್ರಂಥವೇ ನಮಗೆ ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ. ಅದನ್ನು ಉಳಿಸಿ ರಕ್ಷಿಸುವುದು ಹಾಗೂ ಪಾಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಸಂವಿಧಾನದ ಆಶಾಯದಲ್ಲಿರುವ ಪ್ರಜಾಸತ್ತಾತ್ಮಕ, ಗಣರಾಜ್ಯ ದೇಶವನ್ನಿ ನಿರ್ಮಿಸಲು ಎಲ್ಲರೂ ಒಂದಾಗಿ ಸಮಾನತೆಯ ರಾಷ್ಟ್ರದ ನಿರ್ಮಾಣ ಮಾಡಬೇಕು. ಒಂದು ದೇಶವು ಎಲ್ಲಾ ರೀತಿಯಿಂದಲೂ ಮುಂದುವರೆಯಬೇಕು ಎಂದರೆ ಮಹಿಳೆಯರು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಸಂವಿಧಾನದಲ್ಲಿರುವ ಮಹಿಳಾ ಮೀಸಲಾತಿಯನ್ನು ಉಪಯೋಗಿಸಿಕೊಂಡು ಪರಿಶ್ರಮದಿಂದ ಮಹಿಳೆಯರು ಹೆಚ್ಚಾಗಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕು. ಹಾಗೂ ಸಂವಿಧಾನವನ್ನು ಪ್ರತೋಯೊಬ್ಬರು ಒಪ್ಪಿ ಅಪ್ಪಿಕೊಳ್ಳಬೇಕು ಎಂದು ಹೇಳಿದರು.

ಇಂದು ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು ಸಂವಿಧಾನದ ಆಶಯಗಳನ್ನು ಒಳಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರುವ ಮೂಲಕ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದೆ. ಈ ಯೋಜನೆಗಳ ದೂರದೃಷ್ಟಿ ಕೋನವನ್ನು ಅರಿತು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ನಮ್ಮನ್ನು ಸಾಕಿ ಸಲಹುತ್ತಿರುವ ಸಂವಿಧಾನವನ್ನು ಅದರ ಆಶಯಗಳನ್ನು ಸಂರಕ್ಷಿಸುವ ಹಾಗೂ ಜನರಿಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಅದಕ್ಕೆ ತಾವೆಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಹಿರಿಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ. ಡಿ ಆನಂದ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ, ಅಹಿಂದ ಜವರಪ್ಪ, ಸೋಮಯ್ಯ ಮಲೆಯೂರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago