ಮೈಸೂರು

ಸಂವಿಧಾನ ತಜ್ಞ ಡಾ. ಸಿಕೆಎನ್‌ ರಾಜ ನಿಧನ

ಮೈಸೂರು: ಹಿರಿಯ ಸಂವಿಧಾನ ತಜ್ಞ, ಲೇಖಕ ಡಾ. ಸಿ.ಕೆ.ಎನ್‌ ರಾಜ ಮೈಸೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕಾನೂನು ತಜ್ಞರಾಗಿ, ನ್ಯಾಯವಾದಿಯಾಗಿ, ಲೇಖಕರಾಗಿ ಹೆಸರು ಮಾಡಿದ ಡಾ. ರಾಜ ಅವರ ಹುಟ್ಟೂರು ನಂಜನಗೂಡು. 1932 ಫೆಬ್ರುವರಿ 19ರಂದು ನಂಜನಗೂಡಿನಲ್ಲಿ ಸಿ.ಕೆ. ನಾಗಪ್ಪ-, ಸೀತಾ ಲಕ್ಷ್ಮಮ್ಮ ದಂಪತಿ ಪುತ್ರನಾಗಿ ಜನಿಸಿದ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಪದವಿ ಪಡೆದು ಮೈಸೂರು ವಿವಿ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

ಬಳಿಕ ವಕೀಲಿ ವೃತ್ತಿ ಆರಂಭಿಸಿದ ಅವರು ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಅಧ್ಯಾಪಕರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ರೀಡರ್ ಆಗಿ ಕಾರ್ಯನಿರ್ವಹಿಸಿದ್ದರು. ಮಹಾಜನ್‌ ಕಾನೂನು ಕಾಲೇಜಿನ ಪ್ರಾಂಶುಪಾಲರು, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಅವರು ಕಾನೂನು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.

ಕಾನೂನು ಮತ್ತು ಸಂವಿಧಾನಕ್ಕೆ ಸಂಬಂಧಿಸಿ ಅನೇಕ ಪುಸ್ತಕಗಳನ್ನು ಬರೆದಿರುವ ಡಾ. ರಾಜ ಅವರು ಬೇರೆ ಬೇರೆ ಪತ್ರಿಕೆಗಳಿಗೆ ಕಾನೂನು ಸಂಬಂಧಿ ಲೇಖನಗಳನ್ನು ಬರೆಯುತ್ತಿದ್ದರು. ಧಾರಾವಾಹಿ ರೂಪದಲ್ಲಿ ಕಾದಂಬರಿಗಳನ್ನೂ ಬರೆದಿದ್ದಾರೆ. ಹಾಸ್ಯ ಸಾಹಿತ್ಯ ಬರವಣಿಗೆಯಲ್ಲೂ ಇವರು ಖ್ಯಾತರಾಗಿದ್ದರು. ಕಾನೂನು ಮತ್ತು ಸಂಸ್ಕೃತಿ, ಪಂಡಿತ್ಜೀಗೆ ಸೈನೋಸೈಟಿಸ್, ಪುನರುತ್ಥಾನ, ಹಾಗೂ ರಾಯರ ವಠಾರ ಇವರ ಪ್ರಮುಖ ಕೃತಿಗಳು.

ಖ್ಯಾತ ಕಾನೂನುತಜ್ಞ ಬೆಂಜಮಿನ್ ಎನ್. ಕಾರ್ಡೋಜೊ ಅವರು ರಚಿಸಿದ “ದ ನೇಚರ್ ಆಫ್ ದ ಜುಡಿಷಿಯಲ್ ಪ್ರೊಸೆಸ್ʼ ಎಂಬ ಕೃತಿಯನ್ನು ರಾಜ ಅವರು “ನ್ಯಾಯಿಕ ಪ್ರಕ್ರಿಯೆಯ ಸ್ವರೂಪ ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago