ಮೈಸೂರು

ಸಂವಿಧಾನ ತಜ್ಞ ಡಾ. ಸಿಕೆಎನ್‌ ರಾಜ ನಿಧನ

ಮೈಸೂರು: ಹಿರಿಯ ಸಂವಿಧಾನ ತಜ್ಞ, ಲೇಖಕ ಡಾ. ಸಿ.ಕೆ.ಎನ್‌ ರಾಜ ಮೈಸೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕಾನೂನು ತಜ್ಞರಾಗಿ, ನ್ಯಾಯವಾದಿಯಾಗಿ, ಲೇಖಕರಾಗಿ ಹೆಸರು ಮಾಡಿದ ಡಾ. ರಾಜ ಅವರ ಹುಟ್ಟೂರು ನಂಜನಗೂಡು. 1932 ಫೆಬ್ರುವರಿ 19ರಂದು ನಂಜನಗೂಡಿನಲ್ಲಿ ಸಿ.ಕೆ. ನಾಗಪ್ಪ-, ಸೀತಾ ಲಕ್ಷ್ಮಮ್ಮ ದಂಪತಿ ಪುತ್ರನಾಗಿ ಜನಿಸಿದ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಪದವಿ ಪಡೆದು ಮೈಸೂರು ವಿವಿ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

ಬಳಿಕ ವಕೀಲಿ ವೃತ್ತಿ ಆರಂಭಿಸಿದ ಅವರು ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಅಧ್ಯಾಪಕರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ರೀಡರ್ ಆಗಿ ಕಾರ್ಯನಿರ್ವಹಿಸಿದ್ದರು. ಮಹಾಜನ್‌ ಕಾನೂನು ಕಾಲೇಜಿನ ಪ್ರಾಂಶುಪಾಲರು, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಅವರು ಕಾನೂನು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.

ಕಾನೂನು ಮತ್ತು ಸಂವಿಧಾನಕ್ಕೆ ಸಂಬಂಧಿಸಿ ಅನೇಕ ಪುಸ್ತಕಗಳನ್ನು ಬರೆದಿರುವ ಡಾ. ರಾಜ ಅವರು ಬೇರೆ ಬೇರೆ ಪತ್ರಿಕೆಗಳಿಗೆ ಕಾನೂನು ಸಂಬಂಧಿ ಲೇಖನಗಳನ್ನು ಬರೆಯುತ್ತಿದ್ದರು. ಧಾರಾವಾಹಿ ರೂಪದಲ್ಲಿ ಕಾದಂಬರಿಗಳನ್ನೂ ಬರೆದಿದ್ದಾರೆ. ಹಾಸ್ಯ ಸಾಹಿತ್ಯ ಬರವಣಿಗೆಯಲ್ಲೂ ಇವರು ಖ್ಯಾತರಾಗಿದ್ದರು. ಕಾನೂನು ಮತ್ತು ಸಂಸ್ಕೃತಿ, ಪಂಡಿತ್ಜೀಗೆ ಸೈನೋಸೈಟಿಸ್, ಪುನರುತ್ಥಾನ, ಹಾಗೂ ರಾಯರ ವಠಾರ ಇವರ ಪ್ರಮುಖ ಕೃತಿಗಳು.

ಖ್ಯಾತ ಕಾನೂನುತಜ್ಞ ಬೆಂಜಮಿನ್ ಎನ್. ಕಾರ್ಡೋಜೊ ಅವರು ರಚಿಸಿದ “ದ ನೇಚರ್ ಆಫ್ ದ ಜುಡಿಷಿಯಲ್ ಪ್ರೊಸೆಸ್ʼ ಎಂಬ ಕೃತಿಯನ್ನು ರಾಜ ಅವರು “ನ್ಯಾಯಿಕ ಪ್ರಕ್ರಿಯೆಯ ಸ್ವರೂಪ ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

23 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

23 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

23 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

23 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

23 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

23 hours ago