ಮೈಸೂರು: ಹಿರಿಯ ಸಂವಿಧಾನ ತಜ್ಞ, ಲೇಖಕ ಡಾ. ಸಿ.ಕೆ.ಎನ್ ರಾಜ ಮೈಸೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಕಾನೂನು ತಜ್ಞರಾಗಿ, ನ್ಯಾಯವಾದಿಯಾಗಿ, ಲೇಖಕರಾಗಿ ಹೆಸರು ಮಾಡಿದ ಡಾ. ರಾಜ ಅವರ ಹುಟ್ಟೂರು ನಂಜನಗೂಡು. 1932 ಫೆಬ್ರುವರಿ 19ರಂದು ನಂಜನಗೂಡಿನಲ್ಲಿ ಸಿ.ಕೆ. ನಾಗಪ್ಪ-, ಸೀತಾ ಲಕ್ಷ್ಮಮ್ಮ ದಂಪತಿ ಪುತ್ರನಾಗಿ ಜನಿಸಿದ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಪದವಿ ಪಡೆದು ಮೈಸೂರು ವಿವಿ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.
ಬಳಿಕ ವಕೀಲಿ ವೃತ್ತಿ ಆರಂಭಿಸಿದ ಅವರು ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಅಧ್ಯಾಪಕರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಕಾನೂನು ಕಾಲೇಜಿನಲ್ಲಿ ರೀಡರ್ ಆಗಿ ಕಾರ್ಯನಿರ್ವಹಿಸಿದ್ದರು. ಮಹಾಜನ್ ಕಾನೂನು ಕಾಲೇಜಿನ ಪ್ರಾಂಶುಪಾಲರು, ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಅವರು ಕಾನೂನು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.
ಕಾನೂನು ಮತ್ತು ಸಂವಿಧಾನಕ್ಕೆ ಸಂಬಂಧಿಸಿ ಅನೇಕ ಪುಸ್ತಕಗಳನ್ನು ಬರೆದಿರುವ ಡಾ. ರಾಜ ಅವರು ಬೇರೆ ಬೇರೆ ಪತ್ರಿಕೆಗಳಿಗೆ ಕಾನೂನು ಸಂಬಂಧಿ ಲೇಖನಗಳನ್ನು ಬರೆಯುತ್ತಿದ್ದರು. ಧಾರಾವಾಹಿ ರೂಪದಲ್ಲಿ ಕಾದಂಬರಿಗಳನ್ನೂ ಬರೆದಿದ್ದಾರೆ. ಹಾಸ್ಯ ಸಾಹಿತ್ಯ ಬರವಣಿಗೆಯಲ್ಲೂ ಇವರು ಖ್ಯಾತರಾಗಿದ್ದರು. ಕಾನೂನು ಮತ್ತು ಸಂಸ್ಕೃತಿ, ಪಂಡಿತ್ಜೀಗೆ ಸೈನೋಸೈಟಿಸ್, ಪುನರುತ್ಥಾನ, ಹಾಗೂ ರಾಯರ ವಠಾರ ಇವರ ಪ್ರಮುಖ ಕೃತಿಗಳು.
ಖ್ಯಾತ ಕಾನೂನುತಜ್ಞ ಬೆಂಜಮಿನ್ ಎನ್. ಕಾರ್ಡೋಜೊ ಅವರು ರಚಿಸಿದ “ದ ನೇಚರ್ ಆಫ್ ದ ಜುಡಿಷಿಯಲ್ ಪ್ರೊಸೆಸ್ʼ ಎಂಬ ಕೃತಿಯನ್ನು ರಾಜ ಅವರು “ನ್ಯಾಯಿಕ ಪ್ರಕ್ರಿಯೆಯ ಸ್ವರೂಪ ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ.
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…