ಮೈಸೂರು

ಹಾರೋಹಳ್ಳಿಯಲ್ಲಿ ದಕ್ಷಿಣದ ಬುದ್ದಗಯ ಸ್ಮಾರಕ ನಿರ್ಮಾಣ : ಪುರುಷೋತ್ತಮ್‌

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ.

ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ ಬುಧವಾರ (ಜೂ.11) ಬೆಳಿಗ್ಗೆ 11ಕ್ಕೆ 2569ನೇ ಬುದ್ಧ ಪೂರ್ಣಿಮೆ ಅಂಗವಾಗಿ ದಕ್ಷಿಣ ಭಾರತದ ಬುದ್ಧ ಗಯಾ ಸ್ಮಾರಕ ನಿರ್ಮಾಣಕ್ಕಾಗಿ ಧಮ್ಮ ಸಂಕಲ್ಪ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಈ ಭೂಮಿ ಮೇಲಿನ ಮನುಷ್ಯರೂ ಒಳಗೊಂಡಂತೆ ಎಲ್ಲ ಜೀವಿಗಳ ಸುಖ, ಶಾಂತಿ, ನೆಮ್ಮದಿಯನ್ನು ಬೌದ್ಧ ಪರಂಪರೆ ಬಯಸುತ್ತದೆ. ಇಂತಹ ಮಾನವೀಯತೆ, ಸಮಾನತೆಯ ಆಶಯಗಳ ಬೌದ್ಧ ಧರ್ಮವನ್ನು ಉಳಿಸಿಕೊಳ್ಳಲು ಮೈಸೂರು ದಕ್ಷಿಣ ಭಾಗದಲ್ಲಿ ಬುದ್ಧ ಗಯಾ ಸ್ಮಾರಕ ಸ್ಥಾಪಿಸಲು ತೀರ್ಮಾನ ಮಾಡಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ ದಲಿತ ಮುಖಂಡರಾದ ಜಯಮ್ಮ ಹಾಗೂ ಅವರ ಕುಟುಂಬದವರು ಸ್ವ-ಇಚ್ಛೆಯಿಂದ ತಮಗೆ ಸೇರಿದ ಭೂಮಿಯನ್ನು ದಾನವಾಗಿ ನೀಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರರು, ಚಿಂತಕರು ಭಾಗಿಯಾಗಿತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಸದ್ಯ ಉತ್ತರ ಭಾರತದಲ್ಲಿರುವ ಬುದ್ಧ ಗಯಾವನ್ನು ಎಲ್ಲ ಮನುವಾದಿಗಳು ಆಕ್ರಮಿಸಿಕೊಂಡಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ಆ ಭಾಗದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಎಲ್ಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಅಡ್ಡಿ ಪಡಿಸಿವೆ. ಜಮೀನು ನೀಡುತ್ತಿದ್ದಾರೆಂದು ಹೇಳಲಾಗಿದ್ದ ಕುಟುಂಬವನ್ನು ಕತ್ತಲೆಯಲ್ಲಿಟ್ಟು ಆ ಕೆಲಸ ಮಾಡಲಾಗುತ್ತಿತ್ತು. ಹೀಗಾಗಿ ವಿರೋಧಿಸಲಾಯಿತು ಎಂದು ಹೇಳಿದರು.

ದಲಿತ ಮುಖಂಡರಾದ ಚೋರನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಎಚ್.ಆರ್.ಸುರೇಶ್‌ಕುಮಾರ್, ಹರಿಹರ ಆನಂದಸ್ವಾಮಿ, ನಂಜುಂಡಸ್ವಾಮಿ, ಮಹದೇವು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

3 mins ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

1 hour ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

1 hour ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

2 hours ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

3 hours ago