ಮೈಸೂರು

ಹಾರೋಹಳ್ಳಿಯಲ್ಲಿ ದಕ್ಷಿಣದ ಬುದ್ದಗಯ ಸ್ಮಾರಕ ನಿರ್ಮಾಣ : ಪುರುಷೋತ್ತಮ್‌

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ.

ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ ಬುಧವಾರ (ಜೂ.11) ಬೆಳಿಗ್ಗೆ 11ಕ್ಕೆ 2569ನೇ ಬುದ್ಧ ಪೂರ್ಣಿಮೆ ಅಂಗವಾಗಿ ದಕ್ಷಿಣ ಭಾರತದ ಬುದ್ಧ ಗಯಾ ಸ್ಮಾರಕ ನಿರ್ಮಾಣಕ್ಕಾಗಿ ಧಮ್ಮ ಸಂಕಲ್ಪ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಈ ಭೂಮಿ ಮೇಲಿನ ಮನುಷ್ಯರೂ ಒಳಗೊಂಡಂತೆ ಎಲ್ಲ ಜೀವಿಗಳ ಸುಖ, ಶಾಂತಿ, ನೆಮ್ಮದಿಯನ್ನು ಬೌದ್ಧ ಪರಂಪರೆ ಬಯಸುತ್ತದೆ. ಇಂತಹ ಮಾನವೀಯತೆ, ಸಮಾನತೆಯ ಆಶಯಗಳ ಬೌದ್ಧ ಧರ್ಮವನ್ನು ಉಳಿಸಿಕೊಳ್ಳಲು ಮೈಸೂರು ದಕ್ಷಿಣ ಭಾಗದಲ್ಲಿ ಬುದ್ಧ ಗಯಾ ಸ್ಮಾರಕ ಸ್ಥಾಪಿಸಲು ತೀರ್ಮಾನ ಮಾಡಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ ದಲಿತ ಮುಖಂಡರಾದ ಜಯಮ್ಮ ಹಾಗೂ ಅವರ ಕುಟುಂಬದವರು ಸ್ವ-ಇಚ್ಛೆಯಿಂದ ತಮಗೆ ಸೇರಿದ ಭೂಮಿಯನ್ನು ದಾನವಾಗಿ ನೀಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರರು, ಚಿಂತಕರು ಭಾಗಿಯಾಗಿತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಸದ್ಯ ಉತ್ತರ ಭಾರತದಲ್ಲಿರುವ ಬುದ್ಧ ಗಯಾವನ್ನು ಎಲ್ಲ ಮನುವಾದಿಗಳು ಆಕ್ರಮಿಸಿಕೊಂಡಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ಆ ಭಾಗದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಎಲ್ಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಅಡ್ಡಿ ಪಡಿಸಿವೆ. ಜಮೀನು ನೀಡುತ್ತಿದ್ದಾರೆಂದು ಹೇಳಲಾಗಿದ್ದ ಕುಟುಂಬವನ್ನು ಕತ್ತಲೆಯಲ್ಲಿಟ್ಟು ಆ ಕೆಲಸ ಮಾಡಲಾಗುತ್ತಿತ್ತು. ಹೀಗಾಗಿ ವಿರೋಧಿಸಲಾಯಿತು ಎಂದು ಹೇಳಿದರು.

ದಲಿತ ಮುಖಂಡರಾದ ಚೋರನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಎಚ್.ಆರ್.ಸುರೇಶ್‌ಕುಮಾರ್, ಹರಿಹರ ಆನಂದಸ್ವಾಮಿ, ನಂಜುಂಡಸ್ವಾಮಿ, ಮಹದೇವು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago