ಮೈಸೂರು

ಹಾರೋಹಳ್ಳಿಯಲ್ಲಿ ದಕ್ಷಿಣದ ಬುದ್ದಗಯ ಸ್ಮಾರಕ ನಿರ್ಮಾಣ : ಪುರುಷೋತ್ತಮ್‌

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ.

ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ ಬುಧವಾರ (ಜೂ.11) ಬೆಳಿಗ್ಗೆ 11ಕ್ಕೆ 2569ನೇ ಬುದ್ಧ ಪೂರ್ಣಿಮೆ ಅಂಗವಾಗಿ ದಕ್ಷಿಣ ಭಾರತದ ಬುದ್ಧ ಗಯಾ ಸ್ಮಾರಕ ನಿರ್ಮಾಣಕ್ಕಾಗಿ ಧಮ್ಮ ಸಂಕಲ್ಪ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಈ ಭೂಮಿ ಮೇಲಿನ ಮನುಷ್ಯರೂ ಒಳಗೊಂಡಂತೆ ಎಲ್ಲ ಜೀವಿಗಳ ಸುಖ, ಶಾಂತಿ, ನೆಮ್ಮದಿಯನ್ನು ಬೌದ್ಧ ಪರಂಪರೆ ಬಯಸುತ್ತದೆ. ಇಂತಹ ಮಾನವೀಯತೆ, ಸಮಾನತೆಯ ಆಶಯಗಳ ಬೌದ್ಧ ಧರ್ಮವನ್ನು ಉಳಿಸಿಕೊಳ್ಳಲು ಮೈಸೂರು ದಕ್ಷಿಣ ಭಾಗದಲ್ಲಿ ಬುದ್ಧ ಗಯಾ ಸ್ಮಾರಕ ಸ್ಥಾಪಿಸಲು ತೀರ್ಮಾನ ಮಾಡಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ ದಲಿತ ಮುಖಂಡರಾದ ಜಯಮ್ಮ ಹಾಗೂ ಅವರ ಕುಟುಂಬದವರು ಸ್ವ-ಇಚ್ಛೆಯಿಂದ ತಮಗೆ ಸೇರಿದ ಭೂಮಿಯನ್ನು ದಾನವಾಗಿ ನೀಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರರು, ಚಿಂತಕರು ಭಾಗಿಯಾಗಿತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಸದ್ಯ ಉತ್ತರ ಭಾರತದಲ್ಲಿರುವ ಬುದ್ಧ ಗಯಾವನ್ನು ಎಲ್ಲ ಮನುವಾದಿಗಳು ಆಕ್ರಮಿಸಿಕೊಂಡಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ಆ ಭಾಗದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಎಲ್ಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಅಡ್ಡಿ ಪಡಿಸಿವೆ. ಜಮೀನು ನೀಡುತ್ತಿದ್ದಾರೆಂದು ಹೇಳಲಾಗಿದ್ದ ಕುಟುಂಬವನ್ನು ಕತ್ತಲೆಯಲ್ಲಿಟ್ಟು ಆ ಕೆಲಸ ಮಾಡಲಾಗುತ್ತಿತ್ತು. ಹೀಗಾಗಿ ವಿರೋಧಿಸಲಾಯಿತು ಎಂದು ಹೇಳಿದರು.

ದಲಿತ ಮುಖಂಡರಾದ ಚೋರನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಎಚ್.ಆರ್.ಸುರೇಶ್‌ಕುಮಾರ್, ಹರಿಹರ ಆನಂದಸ್ವಾಮಿ, ನಂಜುಂಡಸ್ವಾಮಿ, ಮಹದೇವು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

8 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

9 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

13 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

15 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

16 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

17 hours ago