ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ.
ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ ಬುಧವಾರ (ಜೂ.11) ಬೆಳಿಗ್ಗೆ 11ಕ್ಕೆ 2569ನೇ ಬುದ್ಧ ಪೂರ್ಣಿಮೆ ಅಂಗವಾಗಿ ದಕ್ಷಿಣ ಭಾರತದ ಬುದ್ಧ ಗಯಾ ಸ್ಮಾರಕ ನಿರ್ಮಾಣಕ್ಕಾಗಿ ಧಮ್ಮ ಸಂಕಲ್ಪ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.
ಈ ಭೂಮಿ ಮೇಲಿನ ಮನುಷ್ಯರೂ ಒಳಗೊಂಡಂತೆ ಎಲ್ಲ ಜೀವಿಗಳ ಸುಖ, ಶಾಂತಿ, ನೆಮ್ಮದಿಯನ್ನು ಬೌದ್ಧ ಪರಂಪರೆ ಬಯಸುತ್ತದೆ. ಇಂತಹ ಮಾನವೀಯತೆ, ಸಮಾನತೆಯ ಆಶಯಗಳ ಬೌದ್ಧ ಧರ್ಮವನ್ನು ಉಳಿಸಿಕೊಳ್ಳಲು ಮೈಸೂರು ದಕ್ಷಿಣ ಭಾಗದಲ್ಲಿ ಬುದ್ಧ ಗಯಾ ಸ್ಮಾರಕ ಸ್ಥಾಪಿಸಲು ತೀರ್ಮಾನ ಮಾಡಲಾಗುತ್ತಿದೆ.
ಈ ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ ದಲಿತ ಮುಖಂಡರಾದ ಜಯಮ್ಮ ಹಾಗೂ ಅವರ ಕುಟುಂಬದವರು ಸ್ವ-ಇಚ್ಛೆಯಿಂದ ತಮಗೆ ಸೇರಿದ ಭೂಮಿಯನ್ನು ದಾನವಾಗಿ ನೀಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರರು, ಚಿಂತಕರು ಭಾಗಿಯಾಗಿತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.
ಸದ್ಯ ಉತ್ತರ ಭಾರತದಲ್ಲಿರುವ ಬುದ್ಧ ಗಯಾವನ್ನು ಎಲ್ಲ ಮನುವಾದಿಗಳು ಆಕ್ರಮಿಸಿಕೊಂಡಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ಆ ಭಾಗದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಎಲ್ಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಅಡ್ಡಿ ಪಡಿಸಿವೆ. ಜಮೀನು ನೀಡುತ್ತಿದ್ದಾರೆಂದು ಹೇಳಲಾಗಿದ್ದ ಕುಟುಂಬವನ್ನು ಕತ್ತಲೆಯಲ್ಲಿಟ್ಟು ಆ ಕೆಲಸ ಮಾಡಲಾಗುತ್ತಿತ್ತು. ಹೀಗಾಗಿ ವಿರೋಧಿಸಲಾಯಿತು ಎಂದು ಹೇಳಿದರು.
ದಲಿತ ಮುಖಂಡರಾದ ಚೋರನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಎಚ್.ಆರ್.ಸುರೇಶ್ಕುಮಾರ್, ಹರಿಹರ ಆನಂದಸ್ವಾಮಿ, ನಂಜುಂಡಸ್ವಾಮಿ, ಮಹದೇವು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…