ಮೈಸೂರು

ಹಾರೋಹಳ್ಳಿಯಲ್ಲಿ ದಕ್ಷಿಣದ ಬುದ್ದಗಯ ಸ್ಮಾರಕ ನಿರ್ಮಾಣ : ಪುರುಷೋತ್ತಮ್‌

ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ.

ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ ಬುಧವಾರ (ಜೂ.11) ಬೆಳಿಗ್ಗೆ 11ಕ್ಕೆ 2569ನೇ ಬುದ್ಧ ಪೂರ್ಣಿಮೆ ಅಂಗವಾಗಿ ದಕ್ಷಿಣ ಭಾರತದ ಬುದ್ಧ ಗಯಾ ಸ್ಮಾರಕ ನಿರ್ಮಾಣಕ್ಕಾಗಿ ಧಮ್ಮ ಸಂಕಲ್ಪ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಈ ಭೂಮಿ ಮೇಲಿನ ಮನುಷ್ಯರೂ ಒಳಗೊಂಡಂತೆ ಎಲ್ಲ ಜೀವಿಗಳ ಸುಖ, ಶಾಂತಿ, ನೆಮ್ಮದಿಯನ್ನು ಬೌದ್ಧ ಪರಂಪರೆ ಬಯಸುತ್ತದೆ. ಇಂತಹ ಮಾನವೀಯತೆ, ಸಮಾನತೆಯ ಆಶಯಗಳ ಬೌದ್ಧ ಧರ್ಮವನ್ನು ಉಳಿಸಿಕೊಳ್ಳಲು ಮೈಸೂರು ದಕ್ಷಿಣ ಭಾಗದಲ್ಲಿ ಬುದ್ಧ ಗಯಾ ಸ್ಮಾರಕ ಸ್ಥಾಪಿಸಲು ತೀರ್ಮಾನ ಮಾಡಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ ದಲಿತ ಮುಖಂಡರಾದ ಜಯಮ್ಮ ಹಾಗೂ ಅವರ ಕುಟುಂಬದವರು ಸ್ವ-ಇಚ್ಛೆಯಿಂದ ತಮಗೆ ಸೇರಿದ ಭೂಮಿಯನ್ನು ದಾನವಾಗಿ ನೀಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರರು, ಚಿಂತಕರು ಭಾಗಿಯಾಗಿತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಸದ್ಯ ಉತ್ತರ ಭಾರತದಲ್ಲಿರುವ ಬುದ್ಧ ಗಯಾವನ್ನು ಎಲ್ಲ ಮನುವಾದಿಗಳು ಆಕ್ರಮಿಸಿಕೊಂಡಿದ್ದಾರೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ಆ ಭಾಗದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಎಲ್ಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಅಡ್ಡಿ ಪಡಿಸಿವೆ. ಜಮೀನು ನೀಡುತ್ತಿದ್ದಾರೆಂದು ಹೇಳಲಾಗಿದ್ದ ಕುಟುಂಬವನ್ನು ಕತ್ತಲೆಯಲ್ಲಿಟ್ಟು ಆ ಕೆಲಸ ಮಾಡಲಾಗುತ್ತಿತ್ತು. ಹೀಗಾಗಿ ವಿರೋಧಿಸಲಾಯಿತು ಎಂದು ಹೇಳಿದರು.

ದಲಿತ ಮುಖಂಡರಾದ ಚೋರನಹಳ್ಳಿ ಶಿವಣ್ಣ, ತಾಪಂ ಮಾಜಿ ಸದಸ್ಯ ಎಚ್.ಆರ್.ಸುರೇಶ್‌ಕುಮಾರ್, ಹರಿಹರ ಆನಂದಸ್ವಾಮಿ, ನಂಜುಂಡಸ್ವಾಮಿ, ಮಹದೇವು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

4 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

8 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago