ಮೈಸೂರು : ಬೆಂಗಳೂರಿನ ಲಾಲ್ಬಾಗ್ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಅವರು ಇಂದು ಲಿಂಗಾಂಬುದಿ ಸಸ್ಯ ಶಾಸ್ತ್ರೀಯ ತೋಟಕ್ಕೆ ಬೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು, ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಮುಗಿಸುವಂತೆ ಸೂಚಿಸಿದರು.
ಈ ಸಸ್ಯ ಕ್ಷೇತ್ರದಲ್ಲಿ ಸುಮಾರು 300 ವಿವಿಧ ಸಸ್ಯ ಪ್ರಭೇದಗಳೊಂದಿಗೆ, ಔಷಧಿಯ ಮತ್ತು ಸುಗಂಧ ಸಸ್ಯಗಳ ಉದ್ಯಾನವನ, ಗುಲಾಬಿ ತೋಟ, ಟೋಪಿಯರಿ ಉದ್ಯಾನವನ, ಚಿಟ್ಟೆ ಉದ್ಯಾನವನ, ಬಿದಿರಿನ ಗುಂಪು, ಫೈಕಸ್ ಬ್ಲಾಕ್, ಕೊಳ ಸೇರಿದಂತೆ ಸುಮಾರು 150 ಅಡಿ ಉದ್ದದ 12 ಅಡಿ ಅಗಲದ ಸುಂದರವಾದ ರೆಡ್ ಜೇಡ್ ವೈನ್ ನಿಂದ ಕೂಡಿರುವುದನ್ನು ಪರಿಶೀಲಿಸಿದರು.
ನಂತರ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಸುಂದರವಾದ ಸಸ್ಯ ಕ್ಷೇತ್ರ ನಿರ್ಮಾಣವಾಗುತ್ತಿರುವುದು ಮೈಸೂರು ನಗರದಲ್ಲಿರುವ ಪ್ರವಾಸಿ ತಾಣಗಳ ಪಟ್ಟಿಗೆ ಸೇರಲಿದೆ ಎಂದರು.ಇಂತಹ ಸುಂದರವಾದ ಸಸ್ಯಕ್ಷೇತ್ರವನು ನಿರ್ಮಾಣ ಮಾಡಲು ಕಾಳಜಿ ಹೊಂದಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳ ಬದ್ದತೆ ಇರುವುದು ಅಪರೂಪ. ಈ ಸಸ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ಕಾರ್ಮಿಕರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿವಿಧ ಕಾಮಗಾರಿಗಳಿಗೆ ಚಾಲನೆ : ಪಾಲಿಕೆ ವತಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 46 ರ ದಟ್ಟಗಳ್ಳಿಯ ಎಫ್ ಬ್ಲಾಕ್ನ ಅಡ್ಡ ರಸ್ತೆಗಳನ್ನು 20 ಲಕ್ಷ ರೂ. ವೆಚ್ಚದಲ್ಲಿ ಡಾಂಬರೀಕರಣಕ್ಕೆ, ಜೆ. ಬ್ಲಾಕ್ನಲ್ಲಿ 25.00 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಹಾಗೂ ವಾರ್ಡ್ ನಂ. 58ರ ವ್ಯಾಪ್ತಿಯ ರಾಮಕೃಷ್ಣನಗರ ಜಿ ಬ್ಲಾಕ್ನಲ್ಲಿ ರೂ. 55 ಲಕ್ಷ ವೆಚ್ಚದಲ್ಲಿ ಕನಕ ಟ್ರಾವಲ್ಸ್ ನಿಂದ ಗಣಪತಿ ದೇವಸ್ಥಾನದವರಗೆ ರಸ್ತೆ ಮತ್ತು ಪುಟ್ಬಾತ್ ನಿರ್ಮಾಣಕ್ಕೆ ಚಾಲನೆ ನೀಡಿದರು.
ಈ ವೇಳೆ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ಲಕ್ಷ್ಮಿಕಿರಣ್, ಶರತ್ ಕುಮಾರ್, ಮುಖಂಡರಾದ ಖೇಣಿ, ಶಿವಪ್ರಕಾಶ್, ಜಗದೀಶ್, ಶಶಿಕುಮಾರ್, ಕೊಪ್ಪಲು ದಿನೇಶ್, ಕಾರ್ಗಿಲ್ ಮಹೇಶ್, ಗೋಪಾಲ್, ಮನೋಜ್, ಮನು ಗೌಡ, ಪಾಲಿಕೆ ಕಾರ್ಯಪಾಲಕ ಅಭಿಯಂತರರಾದ ಮಹೇಶ್, ಡಿ.ಓ.ಸತ್ಯಮೂರ್ತಿ, ಲಿಂಗಾಂಬುದಿಪಾಳ್ಯ ಸಸ್ಯಕ್ಷೇತ್ರದ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ನವೀನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…