ಮೈಸೂರು

ಲಿಂಗಾಂಬುದಿ ಕೆರೆಯಲ್ಲಿ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ನಿರ್ಮಾಣ : ಶಾಸಕ ಜಿಟಿಡಿ

ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಅವರು ಇಂದು ಲಿಂಗಾಂಬುದಿ ಸಸ್ಯ ಶಾಸ್ತ್ರೀಯ ತೋಟಕ್ಕೆ ಬೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು, ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಮುಗಿಸುವಂತೆ ಸೂಚಿಸಿದರು.

ಈ ಸಸ್ಯ ಕ್ಷೇತ್ರದಲ್ಲಿ ಸುಮಾರು 300 ವಿವಿಧ ಸಸ್ಯ ಪ್ರಭೇದಗಳೊಂದಿಗೆ, ಔಷಧಿಯ ಮತ್ತು ಸುಗಂಧ ಸಸ್ಯಗಳ ಉದ್ಯಾನವನ, ಗುಲಾಬಿ ತೋಟ, ಟೋಪಿಯರಿ ಉದ್ಯಾನವನ, ಚಿಟ್ಟೆ ಉದ್ಯಾನವನ, ಬಿದಿರಿನ ಗುಂಪು, ಫೈಕಸ್ ಬ್ಲಾಕ್, ಕೊಳ ಸೇರಿದಂತೆ ಸುಮಾರು 150 ಅಡಿ ಉದ್ದದ 12 ಅಡಿ ಅಗಲದ ಸುಂದರವಾದ ರೆಡ್ ಜೇಡ್ ವೈನ್ ನಿಂದ ಕೂಡಿರುವುದನ್ನು ಪರಿಶೀಲಿಸಿದರು.

ನಂತರ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಸುಂದರವಾದ ಸಸ್ಯ ಕ್ಷೇತ್ರ ನಿರ್ಮಾಣವಾಗುತ್ತಿರುವುದು ಮೈಸೂರು ನಗರದಲ್ಲಿರುವ ಪ್ರವಾಸಿ ತಾಣಗಳ ಪಟ್ಟಿಗೆ ಸೇರಲಿದೆ ಎಂದರು.ಇಂತಹ ಸುಂದರವಾದ ಸಸ್ಯಕ್ಷೇತ್ರವನು ನಿರ್ಮಾಣ ಮಾಡಲು ಕಾಳಜಿ ಹೊಂದಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳ ಬದ್ದತೆ ಇರುವುದು ಅಪರೂಪ. ಈ ಸಸ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ಕಾರ್ಮಿಕರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿವಿಧ ಕಾಮಗಾರಿಗಳಿಗೆ ಚಾಲನೆ : ಪಾಲಿಕೆ ವತಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 46 ರ ದಟ್ಟಗಳ್ಳಿಯ ಎಫ್ ಬ್ಲಾಕ್‌ನ ಅಡ್ಡ ರಸ್ತೆಗಳನ್ನು 20 ಲಕ್ಷ ರೂ. ವೆಚ್ಚದಲ್ಲಿ ಡಾಂಬರೀಕರಣಕ್ಕೆ, ಜೆ. ಬ್ಲಾಕ್‌ನಲ್ಲಿ 25.00 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಹಾಗೂ ವಾರ್ಡ್ ನಂ. 58ರ ವ್ಯಾಪ್ತಿಯ ರಾಮಕೃಷ್ಣನಗರ ಜಿ ಬ್ಲಾಕ್‌ನಲ್ಲಿ ರೂ. 55 ಲಕ್ಷ ವೆಚ್ಚದಲ್ಲಿ ಕನಕ ಟ್ರಾವಲ್ಸ್ ನಿಂದ ಗಣಪತಿ ದೇವಸ್ಥಾನದವರಗೆ ರಸ್ತೆ ಮತ್ತು ಪುಟ್‌ಬಾತ್ ನಿರ್ಮಾಣಕ್ಕೆ ಚಾಲನೆ ನೀಡಿದರು.

ಈ ವೇಳೆ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ಲಕ್ಷ್ಮಿಕಿರಣ್, ಶರತ್ ಕುಮಾರ್, ಮುಖಂಡರಾದ ಖೇಣಿ, ಶಿವಪ್ರಕಾಶ್, ಜಗದೀಶ್, ಶಶಿಕುಮಾರ್, ಕೊಪ್ಪಲು ದಿನೇಶ್, ಕಾರ್ಗಿಲ್ ಮಹೇಶ್, ಗೋಪಾಲ್, ಮನೋಜ್, ಮನು ಗೌಡ, ಪಾಲಿಕೆ ಕಾರ್ಯಪಾಲಕ ಅಭಿಯಂತರರಾದ ಮಹೇಶ್, ಡಿ.ಓ.ಸತ್ಯಮೂರ್ತಿ, ಲಿಂಗಾಂಬುದಿಪಾಳ್ಯ ಸಸ್ಯಕ್ಷೇತ್ರದ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ನವೀನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

lokesh

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

52 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago