ಮೈಸೂರು

ಲಿಂಗಾಂಬುದಿ ಕೆರೆಯಲ್ಲಿ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ನಿರ್ಮಾಣ : ಶಾಸಕ ಜಿಟಿಡಿ

ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಅವರು ಇಂದು ಲಿಂಗಾಂಬುದಿ ಸಸ್ಯ ಶಾಸ್ತ್ರೀಯ ತೋಟಕ್ಕೆ ಬೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು, ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಮುಗಿಸುವಂತೆ ಸೂಚಿಸಿದರು.

ಈ ಸಸ್ಯ ಕ್ಷೇತ್ರದಲ್ಲಿ ಸುಮಾರು 300 ವಿವಿಧ ಸಸ್ಯ ಪ್ರಭೇದಗಳೊಂದಿಗೆ, ಔಷಧಿಯ ಮತ್ತು ಸುಗಂಧ ಸಸ್ಯಗಳ ಉದ್ಯಾನವನ, ಗುಲಾಬಿ ತೋಟ, ಟೋಪಿಯರಿ ಉದ್ಯಾನವನ, ಚಿಟ್ಟೆ ಉದ್ಯಾನವನ, ಬಿದಿರಿನ ಗುಂಪು, ಫೈಕಸ್ ಬ್ಲಾಕ್, ಕೊಳ ಸೇರಿದಂತೆ ಸುಮಾರು 150 ಅಡಿ ಉದ್ದದ 12 ಅಡಿ ಅಗಲದ ಸುಂದರವಾದ ರೆಡ್ ಜೇಡ್ ವೈನ್ ನಿಂದ ಕೂಡಿರುವುದನ್ನು ಪರಿಶೀಲಿಸಿದರು.

ನಂತರ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಸುಂದರವಾದ ಸಸ್ಯ ಕ್ಷೇತ್ರ ನಿರ್ಮಾಣವಾಗುತ್ತಿರುವುದು ಮೈಸೂರು ನಗರದಲ್ಲಿರುವ ಪ್ರವಾಸಿ ತಾಣಗಳ ಪಟ್ಟಿಗೆ ಸೇರಲಿದೆ ಎಂದರು.ಇಂತಹ ಸುಂದರವಾದ ಸಸ್ಯಕ್ಷೇತ್ರವನು ನಿರ್ಮಾಣ ಮಾಡಲು ಕಾಳಜಿ ಹೊಂದಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳ ಬದ್ದತೆ ಇರುವುದು ಅಪರೂಪ. ಈ ಸಸ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ಕಾರ್ಮಿಕರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿವಿಧ ಕಾಮಗಾರಿಗಳಿಗೆ ಚಾಲನೆ : ಪಾಲಿಕೆ ವತಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 46 ರ ದಟ್ಟಗಳ್ಳಿಯ ಎಫ್ ಬ್ಲಾಕ್‌ನ ಅಡ್ಡ ರಸ್ತೆಗಳನ್ನು 20 ಲಕ್ಷ ರೂ. ವೆಚ್ಚದಲ್ಲಿ ಡಾಂಬರೀಕರಣಕ್ಕೆ, ಜೆ. ಬ್ಲಾಕ್‌ನಲ್ಲಿ 25.00 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಹಾಗೂ ವಾರ್ಡ್ ನಂ. 58ರ ವ್ಯಾಪ್ತಿಯ ರಾಮಕೃಷ್ಣನಗರ ಜಿ ಬ್ಲಾಕ್‌ನಲ್ಲಿ ರೂ. 55 ಲಕ್ಷ ವೆಚ್ಚದಲ್ಲಿ ಕನಕ ಟ್ರಾವಲ್ಸ್ ನಿಂದ ಗಣಪತಿ ದೇವಸ್ಥಾನದವರಗೆ ರಸ್ತೆ ಮತ್ತು ಪುಟ್‌ಬಾತ್ ನಿರ್ಮಾಣಕ್ಕೆ ಚಾಲನೆ ನೀಡಿದರು.

ಈ ವೇಳೆ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ಲಕ್ಷ್ಮಿಕಿರಣ್, ಶರತ್ ಕುಮಾರ್, ಮುಖಂಡರಾದ ಖೇಣಿ, ಶಿವಪ್ರಕಾಶ್, ಜಗದೀಶ್, ಶಶಿಕುಮಾರ್, ಕೊಪ್ಪಲು ದಿನೇಶ್, ಕಾರ್ಗಿಲ್ ಮಹೇಶ್, ಗೋಪಾಲ್, ಮನೋಜ್, ಮನು ಗೌಡ, ಪಾಲಿಕೆ ಕಾರ್ಯಪಾಲಕ ಅಭಿಯಂತರರಾದ ಮಹೇಶ್, ಡಿ.ಓ.ಸತ್ಯಮೂರ್ತಿ, ಲಿಂಗಾಂಬುದಿಪಾಳ್ಯ ಸಸ್ಯಕ್ಷೇತ್ರದ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ನವೀನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

lokesh

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

10 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

10 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

11 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

16 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

19 hours ago