car accident
ನಂಜನಗೂಡು: ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು- ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿ ೭೬೬ರ ಸಿಂಧುವಳ್ಳಿಪುರದಲ್ಲಿ ನಡೆದಿದೆ.
ಕಾರಿನ ಚಾಲಕ ಅಸ್ಸಾಂ ಮೂಲದ ದಿನೇಶ ಸ್ಥಳದಲ್ಲೇ ಮೃತಪಟ್ಟವರು. ಕಾರಿನಲ್ಲಿದ್ದ ಮಂಡ್ಯ ನಗರಸಭೆ ಸದಸ್ಯ ಶಿವಪ್ರಕಾಶ್ ಅವರ ಪುತ್ರ ಚೆನ್ನೈನ ಐಆರ್ಎಸ್ ಕಂಪೆನಿಯ ಉದ್ಯೋಗಿ ತೇಜಸ್ ಕುಮಾರ್, ಈತನ ಸಹೋದರ ಕುಶಾಲ್, ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯದ ಈ ಕಾರು ಗುಂಡ್ಲುಪೇಟೆಯತ್ತ ತೆರಳುತ್ತಿದ್ದಾಗ ಸಿಂಧುವಳ್ಳಿಪುರದಲ್ಲಿ ಎದುರಿನಿಂದ ಅತಿ ವೇಗವಾಗಿ ಬಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ನಂಜನಗೂಡು ಸಂಚಾರ ಠಾಣೆಯ ಅಧಿಕಾರಿಗಳಾದ ಸಿದ್ದರಾಜು ಹಾಗೂ ಮಾದೇಶ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಿದ್ದಾರೆ.ಕಂಟೇನರ್ ಚಾಲಕ ಪರಾರಿಯಾಗಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…