ಮೈಸೂರು

ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.

ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಾಂಡವಪುರ, ಕೆಂಪಿಸಿದ್ದನಹುಂಡಿ, ಹುಳಿಮಾವು, ಮರಡಿಹುಂಡಿ, ಹಳ್ಳಿದಿಡ್ಡಿ, ಏಚಗಳ್ಳಿ, ಮರಳೂರು, ಬಿದರಗೂಡು, ರಾಂಪುರ, ಬಂಚಳ್ಳಿಹುಂಡಿ, ಚಿಕ್ಕಯ್ಯನಛತ್ರ, ಬಸವನಪುರ, ಹೆಜ್ಜಿಗೆ, ತೊರೆಮಾವು, ಅಡಕನಹಳ್ಳಿ, ಕಡಕೊಳ, ಕೋಚನಹಳ್ಳಿ, ಕೂಡನಹಳ್ಳಿ, ಮಾಕನಹುಂಡಿ, ಸಜ್ಜೆಹುಂಡಿ, ರಾಯನಹುಂಡಿ, ಸೋಮೇಶ್ವರಪುರ, ಹಬ್ಯಾ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ನಿರಂತರ ಮಳೆಯಾಗುತ್ತಿದೆ.

ಮಳೆ ಆರಂಭವಾದಾಗ ರೈತರ ಮೊಗವು ಸಂತಸಗೊಂಡಿತ್ತು. ಆದರೆ ಇದೀಗ ಸತತ ಮಳೆಯಿಂದಾಗಿ ದನ ಕರುಗಳಿಗೆ ಮೇವು ತರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೂ ಮಳೆ ಅಡ್ಡಿಯಾಗಿದ್ದು, ಕೈಗಾರಿಕಾ ಪ್ರದೇಶಗಳಿಗೆ ಉದ್ಯೋಗಕ್ಕೆ ಹೋಗುವ ಕೆಲಸಗಾರರಿಗೂ ತೊಂದರೆಯಾಗಿದೆ.

ಮಳೆಯ ಜೊತೆಗೆ ಶೀತ ಗಾಳಿಯು ಬೀಸತೊಡಗಿದ್ದರಿಂದ ಜನರು ಅನಾರೋಗ್ಯಕ್ಕೀಡಾಗಿ‌ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

24 mins ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

36 mins ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

53 mins ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

1 hour ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

1 hour ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago