ಮೈಸೂರು

ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.

ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಾಂಡವಪುರ, ಕೆಂಪಿಸಿದ್ದನಹುಂಡಿ, ಹುಳಿಮಾವು, ಮರಡಿಹುಂಡಿ, ಹಳ್ಳಿದಿಡ್ಡಿ, ಏಚಗಳ್ಳಿ, ಮರಳೂರು, ಬಿದರಗೂಡು, ರಾಂಪುರ, ಬಂಚಳ್ಳಿಹುಂಡಿ, ಚಿಕ್ಕಯ್ಯನಛತ್ರ, ಬಸವನಪುರ, ಹೆಜ್ಜಿಗೆ, ತೊರೆಮಾವು, ಅಡಕನಹಳ್ಳಿ, ಕಡಕೊಳ, ಕೋಚನಹಳ್ಳಿ, ಕೂಡನಹಳ್ಳಿ, ಮಾಕನಹುಂಡಿ, ಸಜ್ಜೆಹುಂಡಿ, ರಾಯನಹುಂಡಿ, ಸೋಮೇಶ್ವರಪುರ, ಹಬ್ಯಾ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ನಿರಂತರ ಮಳೆಯಾಗುತ್ತಿದೆ.

ಮಳೆ ಆರಂಭವಾದಾಗ ರೈತರ ಮೊಗವು ಸಂತಸಗೊಂಡಿತ್ತು. ಆದರೆ ಇದೀಗ ಸತತ ಮಳೆಯಿಂದಾಗಿ ದನ ಕರುಗಳಿಗೆ ಮೇವು ತರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೂ ಮಳೆ ಅಡ್ಡಿಯಾಗಿದ್ದು, ಕೈಗಾರಿಕಾ ಪ್ರದೇಶಗಳಿಗೆ ಉದ್ಯೋಗಕ್ಕೆ ಹೋಗುವ ಕೆಲಸಗಾರರಿಗೂ ತೊಂದರೆಯಾಗಿದೆ.

ಮಳೆಯ ಜೊತೆಗೆ ಶೀತ ಗಾಳಿಯು ಬೀಸತೊಡಗಿದ್ದರಿಂದ ಜನರು ಅನಾರೋಗ್ಯಕ್ಕೀಡಾಗಿ‌ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago