kodagu rain
ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.
ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಾಂಡವಪುರ, ಕೆಂಪಿಸಿದ್ದನಹುಂಡಿ, ಹುಳಿಮಾವು, ಮರಡಿಹುಂಡಿ, ಹಳ್ಳಿದಿಡ್ಡಿ, ಏಚಗಳ್ಳಿ, ಮರಳೂರು, ಬಿದರಗೂಡು, ರಾಂಪುರ, ಬಂಚಳ್ಳಿಹುಂಡಿ, ಚಿಕ್ಕಯ್ಯನಛತ್ರ, ಬಸವನಪುರ, ಹೆಜ್ಜಿಗೆ, ತೊರೆಮಾವು, ಅಡಕನಹಳ್ಳಿ, ಕಡಕೊಳ, ಕೋಚನಹಳ್ಳಿ, ಕೂಡನಹಳ್ಳಿ, ಮಾಕನಹುಂಡಿ, ಸಜ್ಜೆಹುಂಡಿ, ರಾಯನಹುಂಡಿ, ಸೋಮೇಶ್ವರಪುರ, ಹಬ್ಯಾ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ನಿರಂತರ ಮಳೆಯಾಗುತ್ತಿದೆ.
ಮಳೆ ಆರಂಭವಾದಾಗ ರೈತರ ಮೊಗವು ಸಂತಸಗೊಂಡಿತ್ತು. ಆದರೆ ಇದೀಗ ಸತತ ಮಳೆಯಿಂದಾಗಿ ದನ ಕರುಗಳಿಗೆ ಮೇವು ತರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೂ ಮಳೆ ಅಡ್ಡಿಯಾಗಿದ್ದು, ಕೈಗಾರಿಕಾ ಪ್ರದೇಶಗಳಿಗೆ ಉದ್ಯೋಗಕ್ಕೆ ಹೋಗುವ ಕೆಲಸಗಾರರಿಗೂ ತೊಂದರೆಯಾಗಿದೆ.
ಮಳೆಯ ಜೊತೆಗೆ ಶೀತ ಗಾಳಿಯು ಬೀಸತೊಡಗಿದ್ದರಿಂದ ಜನರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…