ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.
ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ
ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.
ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.
೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…