ಮೈಸೂರು

ಸತತ ಮಳೆ : ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.

ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ

ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.

ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.

೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

24 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

2 hours ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

3 hours ago