ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.
ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ
ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.
ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.
೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…