ಮೈಸೂರು

ಸತತ ಮಳೆ : ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.

ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ

ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.

ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.

೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

50 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

52 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

54 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago