ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.
ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ
ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.
ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.
೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…