ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ.
ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ ಉರುಳಿದೆ. ರಾಮೇನಹಳ್ಳಿ ಗ್ರಾಮದಲ್ಲಿ ತೊಟ್ಟಿ ಮನೆ ಕುಸಿದು ಬಿದ್ದರೆ, ಹಾರಂಗಿ ಬಲದಂಡೆಯ ೧೫ನೇ ಉಪಕಾಲುವೆ ಹೆಚ್ಚಿದ ನೀರಿನಿಂದಾಗಿ ಕಾಲುವೆ ಒಡೆದು ಹರೀಶ್ ಮತ್ತು ಅಭಿಷೇಕ್ ಎಂಬವರ ಮೆಣಸಿನಕಾಯಿ ಹಾಗೂ ಜೋಳದ ಬೆಳೆಗಳು ಕೊಚ್ಚಿ ಹೋಗಿವೆ. ಹಿರೀಕ್ಯಾತನಹಳ್ಳಿ ಗ್ರಾಮದ ಜಯಮ್ಮ ಎಂಬವರಿಗೆ ಸೇರಿದ ದಪ್ಪ ಮೆಣಸಿನಕಾಯಿ ಬೆಳೆಗೆ ವಿಪರೀತ ನೀರು ನುಗ್ಗಿ ಸಸಿಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ:-ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ
ಹರವೆ ಗ್ರಾಮದಲ್ಲಿ ಚಿಕ್ಕಕೆರೆ ನೀರು ಕೋಡಿ ಬಿದ್ದ ರಭಸಕ್ಕೆ ಭತ್ತದ ಫಸಲು ನೀರಿನಿಂದ ಆವೃತವಾಗಿದೆ. ಮರೂರು ಗ್ರಾಮದ ಸಮೀಪ ಭತ್ತದ ಗದ್ದೆಗೆ ಅಪಾರ ನೀರು ಹರಿದು ಬೆಳೆಗೆ ಹಾನಿಯಾಗಿದೆ. ಮರೂರು ಗ್ರಾಮದ ಕೆರೆ ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಂದಾದರು.
ಹರವೆಯಿಂದ ಕಲ್ಲಹಳ್ಳಿ ರಾಮೇನಹಳ್ಳಿ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಗೆ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿದ್ದರಿಂದ ಹಾನಿಯಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ.
೩ ತಿಂಗಳುಗಳಿಂದ ಮಳೆ ಬಾರದಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ೨ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…