ಮೈಸೂರು

ದೇಶದ ಅಭಿವೃದ್ಧಿ, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ: ಧ್ರುವನಾರಾಯಣ್

ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ

ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳನ್ನು ತಿಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಲವು ದಿನಗಳ ಹಿಂದೆ ಪಾದಯಾತ್ರೆ ನಡೆದಿತ್ತು. ಈ ಸಮಯದಲ್ಲಿ ಕೆಲವು ಪಂಚಾಯತಿಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಇಂದಿನಿಂದ ಉಳಿದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರ ಜೊತೆ ಸಭೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯಗಳ ಬಗ್ಗೆ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ಕಾಂಗ್ರೆಸ್ ಪಕ್ಷದ ಕೊಡುಗೆ ಏನು ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಗುಡುಗಿದರು.

ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮಾಜಿ ಮತ್ತು ಹಾಲಿ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರುಗಳು ಪ್ರತಿಯೊಂದೂ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ದೇಶದ ಅಭಿವೃದ್ಧಿಗೆ ಬೆಳವಣಿಗೆಗೆ ಮತ್ತು ಸ್ವತಂತ್ರ ತರಲು ದೇಶ ಕಟ್ಟಲು ಕಾಂಗ್ರೆಸ್ ಪಕ್ಷದ ಕೊಡುಗೆಗಳ ಬಗ್ಗೆ ತಿಳಿಸಿ ಬ್ರಿಟಿಷರು ಇನ್ನೂರು ವರ್ಷ ಕಾಲ ದೇಶವನ್ನು ದೋಚಿ ಕೊಂಡಿದ್ದ ಇಂಥ ಸಮಯದಲ್ಲಿ ದೇಶ ಬಡತನದಿಂದ ಹಿಂದುಳಿದಿತ್ತು, ಬರಗಾಲ ಸೃಷ್ಟಿಯಾಗಿತ್ತು, ಇಂಥ ಸಮಯದಲ್ಲಿ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆಗಳು ಬಗ್ಗೆ ಪ್ರಚಾರ ಮಾಡಿ ಮುಂದೆ ಬರುವಂತ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿ ಎಂದರು.

 

ಮುಂದೆ ಬರುವಂತಹ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿ ಉತ್ತಮ ಸರ್ಕಾರ ಬರಲು ಮತ್ತು ಬಡವರು ಕೃಷಿಕರು ನೆಮ್ಮದಿಯಿಂದ ಬದುಕಬೇಕಾದರೆ ಯಾರ ಮಾತಿಗೂ ಕಿವಿ ಕೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದರು.
ಐದು ವರ್ಷ ಕಾಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ನಡೆಸಿ ಕೊಟ್ಟ ಮಾತಿನಂತೆ ಹಲವಾರು ಯೋಜನೆಗಳನ್ನು ಮತ್ತು ಕ್ಷೀರ ಭಾಗ್ಯ ಅನ್ನಭಾಗ್ಯ ಶಾಲೆ ಮಕ್ಕಳಿಗೆ ಬೈಸಿಕಲ್ ಶೋ ಮತ್ತು ಮಕ್ಕಳಿಗೆ ವಸ್ತ್ರಗಳನ್ನು ಎಲ್ಲಾ ಸಮುದಾಯದವರಿಗೆ ಭವನ ನಿರ್ಮಿಸಲು ಅನುದಾನ ನೀಡಿದ್ದಾರೆ. ಪ್ರತಿ ಕಾರ್ಡಿಗೂ ಎಂಟು ಕೆಜಿ ಅಕ್ಕಿ ಮತ್ತು ರಾಗಿ ನೀಡಿದರು ಒಟ್ಟಾರೆ ಐದು ವರ್ಷಗಳ ಕಾಲ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರು ಮತ್ತು ರೈತರ ಪರ ಸರ್ಕಾರವಾಗಿತ್ತು.ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಾತು ನನ್ನದಲ್ಲ ಕ್ಷೇತ್ರದ ಜನಗಳು ಹೇಳುತ್ತಿರುವ ಮಾತು ಎಂದರು.

andolana

Recent Posts

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

8 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

13 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

20 mins ago

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago