ಮೈಸೂರು

ದೇಶದ ಅಭಿವೃದ್ಧಿ, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ: ಧ್ರುವನಾರಾಯಣ್

ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ

ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳನ್ನು ತಿಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಲವು ದಿನಗಳ ಹಿಂದೆ ಪಾದಯಾತ್ರೆ ನಡೆದಿತ್ತು. ಈ ಸಮಯದಲ್ಲಿ ಕೆಲವು ಪಂಚಾಯತಿಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಇಂದಿನಿಂದ ಉಳಿದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರ ಜೊತೆ ಸಭೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯಗಳ ಬಗ್ಗೆ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ಕಾಂಗ್ರೆಸ್ ಪಕ್ಷದ ಕೊಡುಗೆ ಏನು ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಗುಡುಗಿದರು.

ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮಾಜಿ ಮತ್ತು ಹಾಲಿ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರುಗಳು ಪ್ರತಿಯೊಂದೂ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ದೇಶದ ಅಭಿವೃದ್ಧಿಗೆ ಬೆಳವಣಿಗೆಗೆ ಮತ್ತು ಸ್ವತಂತ್ರ ತರಲು ದೇಶ ಕಟ್ಟಲು ಕಾಂಗ್ರೆಸ್ ಪಕ್ಷದ ಕೊಡುಗೆಗಳ ಬಗ್ಗೆ ತಿಳಿಸಿ ಬ್ರಿಟಿಷರು ಇನ್ನೂರು ವರ್ಷ ಕಾಲ ದೇಶವನ್ನು ದೋಚಿ ಕೊಂಡಿದ್ದ ಇಂಥ ಸಮಯದಲ್ಲಿ ದೇಶ ಬಡತನದಿಂದ ಹಿಂದುಳಿದಿತ್ತು, ಬರಗಾಲ ಸೃಷ್ಟಿಯಾಗಿತ್ತು, ಇಂಥ ಸಮಯದಲ್ಲಿ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆಗಳು ಬಗ್ಗೆ ಪ್ರಚಾರ ಮಾಡಿ ಮುಂದೆ ಬರುವಂತ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿ ಎಂದರು.

 

ಮುಂದೆ ಬರುವಂತಹ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿ ಉತ್ತಮ ಸರ್ಕಾರ ಬರಲು ಮತ್ತು ಬಡವರು ಕೃಷಿಕರು ನೆಮ್ಮದಿಯಿಂದ ಬದುಕಬೇಕಾದರೆ ಯಾರ ಮಾತಿಗೂ ಕಿವಿ ಕೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದರು.
ಐದು ವರ್ಷ ಕಾಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ನಡೆಸಿ ಕೊಟ್ಟ ಮಾತಿನಂತೆ ಹಲವಾರು ಯೋಜನೆಗಳನ್ನು ಮತ್ತು ಕ್ಷೀರ ಭಾಗ್ಯ ಅನ್ನಭಾಗ್ಯ ಶಾಲೆ ಮಕ್ಕಳಿಗೆ ಬೈಸಿಕಲ್ ಶೋ ಮತ್ತು ಮಕ್ಕಳಿಗೆ ವಸ್ತ್ರಗಳನ್ನು ಎಲ್ಲಾ ಸಮುದಾಯದವರಿಗೆ ಭವನ ನಿರ್ಮಿಸಲು ಅನುದಾನ ನೀಡಿದ್ದಾರೆ. ಪ್ರತಿ ಕಾರ್ಡಿಗೂ ಎಂಟು ಕೆಜಿ ಅಕ್ಕಿ ಮತ್ತು ರಾಗಿ ನೀಡಿದರು ಒಟ್ಟಾರೆ ಐದು ವರ್ಷಗಳ ಕಾಲ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರು ಮತ್ತು ರೈತರ ಪರ ಸರ್ಕಾರವಾಗಿತ್ತು.ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಾತು ನನ್ನದಲ್ಲ ಕ್ಷೇತ್ರದ ಜನಗಳು ಹೇಳುತ್ತಿರುವ ಮಾತು ಎಂದರು.

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

21 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

21 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

21 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago