ಮೈಸೂರು

ದೇಶದ ಅಭಿವೃದ್ಧಿ, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ: ಧ್ರುವನಾರಾಯಣ್

ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ

ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳನ್ನು ತಿಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಲವು ದಿನಗಳ ಹಿಂದೆ ಪಾದಯಾತ್ರೆ ನಡೆದಿತ್ತು. ಈ ಸಮಯದಲ್ಲಿ ಕೆಲವು ಪಂಚಾಯತಿಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಇಂದಿನಿಂದ ಉಳಿದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರ ಜೊತೆ ಸಭೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯಗಳ ಬಗ್ಗೆ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ಕಾಂಗ್ರೆಸ್ ಪಕ್ಷದ ಕೊಡುಗೆ ಏನು ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಗುಡುಗಿದರು.

ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮಾಜಿ ಮತ್ತು ಹಾಲಿ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರುಗಳು ಪ್ರತಿಯೊಂದೂ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ದೇಶದ ಅಭಿವೃದ್ಧಿಗೆ ಬೆಳವಣಿಗೆಗೆ ಮತ್ತು ಸ್ವತಂತ್ರ ತರಲು ದೇಶ ಕಟ್ಟಲು ಕಾಂಗ್ರೆಸ್ ಪಕ್ಷದ ಕೊಡುಗೆಗಳ ಬಗ್ಗೆ ತಿಳಿಸಿ ಬ್ರಿಟಿಷರು ಇನ್ನೂರು ವರ್ಷ ಕಾಲ ದೇಶವನ್ನು ದೋಚಿ ಕೊಂಡಿದ್ದ ಇಂಥ ಸಮಯದಲ್ಲಿ ದೇಶ ಬಡತನದಿಂದ ಹಿಂದುಳಿದಿತ್ತು, ಬರಗಾಲ ಸೃಷ್ಟಿಯಾಗಿತ್ತು, ಇಂಥ ಸಮಯದಲ್ಲಿ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆಗಳು ಬಗ್ಗೆ ಪ್ರಚಾರ ಮಾಡಿ ಮುಂದೆ ಬರುವಂತ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿ ಎಂದರು.

 

ಮುಂದೆ ಬರುವಂತಹ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿ ಉತ್ತಮ ಸರ್ಕಾರ ಬರಲು ಮತ್ತು ಬಡವರು ಕೃಷಿಕರು ನೆಮ್ಮದಿಯಿಂದ ಬದುಕಬೇಕಾದರೆ ಯಾರ ಮಾತಿಗೂ ಕಿವಿ ಕೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದರು.
ಐದು ವರ್ಷ ಕಾಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ನಡೆಸಿ ಕೊಟ್ಟ ಮಾತಿನಂತೆ ಹಲವಾರು ಯೋಜನೆಗಳನ್ನು ಮತ್ತು ಕ್ಷೀರ ಭಾಗ್ಯ ಅನ್ನಭಾಗ್ಯ ಶಾಲೆ ಮಕ್ಕಳಿಗೆ ಬೈಸಿಕಲ್ ಶೋ ಮತ್ತು ಮಕ್ಕಳಿಗೆ ವಸ್ತ್ರಗಳನ್ನು ಎಲ್ಲಾ ಸಮುದಾಯದವರಿಗೆ ಭವನ ನಿರ್ಮಿಸಲು ಅನುದಾನ ನೀಡಿದ್ದಾರೆ. ಪ್ರತಿ ಕಾರ್ಡಿಗೂ ಎಂಟು ಕೆಜಿ ಅಕ್ಕಿ ಮತ್ತು ರಾಗಿ ನೀಡಿದರು ಒಟ್ಟಾರೆ ಐದು ವರ್ಷಗಳ ಕಾಲ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರು ಮತ್ತು ರೈತರ ಪರ ಸರ್ಕಾರವಾಗಿತ್ತು.ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಾತು ನನ್ನದಲ್ಲ ಕ್ಷೇತ್ರದ ಜನಗಳು ಹೇಳುತ್ತಿರುವ ಮಾತು ಎಂದರು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

6 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

10 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

10 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

10 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

10 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

10 hours ago