ಮೈಸೂರು

ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು

ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪದಲ್ಲಿ ಭಾನುವಾರ ನಡೆದ ಸರಳ ಪ್ರೇಮ ವಿವಾಹದಲ್ಲಿ ಎಸ್.ಪ್ರಿಯಾಂಕ ಹಾಗೂ ಯು.ಕೆ.ಪ್ರಕೃತ್ ಗೌಡ ಪರಸ್ಪರ ಹಾರ ಬದಲಿಸಿಕೊಂಡು ಹಸೆಮಣೆ ಏರಿದರು. ಯಾವುದೇ ಮಂಗಳ ವಾದ್ಯ ಇಲ್ಲದೆ ಕುವೆಂಪು ಅವರ ಆಶಯದಂತೆ ಪ್ರಕೃತ್ ಗೌಡ ಅವರು ಪ್ರಿಯಾಂಕ ಅವರಿಗೆ ತಾಳಿ ಕಟ್ಟುತ್ತಿದ್ದಂತೆ ನೆರೆದಿದ್ದ ಜನರು ಅಕ್ಷತೆ ಕಾಳಿಟ್ಟು ಆಶೀರ್ವಾದ ಮಾಡಿದರು.

ಲಕ್ಷ್ಮೀಕಾಂತ್ ನಗರದ ನಿಸರ್ಗ ಬಡಾವಣೆಯ ಟಿ.ಎಚ್.ಶ್ರೀನಿವಾಸಮೂರ್ತಿ-ದೇವಿ ಶಾರದಾ ದಂಪತಿಯ ಪುತ್ರಿ ಎಸ್.ಪ್ರಿಯಾಂಕ ಮತ್ತು ಮಹಾಲಕ್ಷ್ಮೀ ಬಡಾವಣೆಯ ಯು.ಎಂ.ಕೃಷ್ಣಪ್ಪ ಹಾಗೂ ಎಚ್.ಸಿ.ಶೀಲಾ ದಂಪತಿ ಪುತ್ರ ಯು.ಕೆ.ಪ್ರಕೃತ್ ಗೌಡ ಸರಳ ಪ್ರೇಮ ವಿವಾಹವಾದರು.

ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯಗಳನ್ನು ಬೋಧಿಸುತ್ತಿದ್ದಂತೆಯೇ ಎಸ್.ಪ್ರಿಯಾಂಕ ಹಾಗೂ ಯು.ಕೆ.ಪ್ರಕೃತ್ ಗೌಡ ಪರಸ್ಪರ ಹಾರ ಬದಲಾಯಿಸಿಕೊಂಡರು. ನಂತರ, ವಧುವಿಗೆ ತಾಳಿ ಕಟ್ಟಿದಾಗ ನೆರೆದಿ ದ್ದವರು ಆಶೀರ್ವಾದ ಮಾಡಿದರು.

ಶ್ರೀಮತಿ ಕಾಳಚನ್ನೇಗೌಡ, ಪತ್ರಕರ್ತ ಟಿ.ಗುರುರಾಜ್, ಸಾಮಾಜಿಕ ಕಾರ್ಯಕರ್ತೆ ಮಂಗಳ, ನಿವೃತ್ತ ಅಽಕಾರಿ ರಾಜು, ಉಪನ್ಯಾಸಕರಾದ ಕವಿತ, ಸಾರಿಗೆ ಇಲಾಖೆಯ ಕೃಷ್ಣ, ವಧುವಿನ ಪೋಷಕರಾದ ದೇವಿ ಶಾರದ ಮತ್ತು ಟಿ.ಎಚ್.ಶ್ರೀನಿವಾಸಮೂರ್ತಿ ಮತ್ತಿತರರು ಉಪಸ್ಥಿತರಿದ್ದು ಹಾರೈಸಿದರು.

ಮನವೊಲಿಕೆಗೆ ಯತ್ನ
ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಎಸ್.ಪ್ರಿಯಾಂಕ ಹಾಗೂ ಯು.ಕೆ.ಪ್ರಕೃತ್ ಗೌಡ ಕುಟುಂಬದವರ ಸಮ್ಮುಖದಲ್ಲಿ ಕಲ್ಯಾಣ ಮಂಟಪದಲ್ಲಿ ವಿವಾಹವಾಗುವ ಬಯಕೆ ಹೊಂದಿದ್ದರು. ಈ ವಿಚಾರ ಎರಡೂ ಕುಟುಂಬಗಳ ಮನೆಯವರಿಗೂ ತಿಳಿದಿತ್ತು. ಯು.ಕೆ.ಪ್ರಕೃತ್ ಗೌಡ ಅವರ ಮನೆಗೆ ವಧುವಿನ ಪೋಷಕರು ತೆರಳಿ ಮಾತುಕತೆ ನಡೆಸಿದಾಗ ವರನ ತಂದೆ-ತಾಯಿ ಸಮ್ಮತಿಸಿದ್ದರು. ಆದರೆ, ವರನ ತಾತ-ಅಜ್ಜಿ ಈ ಮದುವೆಗೆ ನಿರಾಕರಿಸಿದ್ದರಿಂದ ಸಮಸ್ಯೆಯಾಯಿತು. ಪ್ರಿಯಾಂಕಳನ್ನು ಬಿಟ್ಟಿರದ ಪ್ರಕೃತ್ ಗೌಡ ಮಾನವ ಮಂಟಪದವರಿಗೆ ವಿಚಾರ ಮುಟ್ಟಿಸಿದರು. ಸಂಚಾಲಕರು ಈ ಕುಟುಂಬಗಳ ಮನವೊಲಿಸಿ ವಿವಾಹ ಮಾಡಿಸಲು ಯತ್ನಿಸಿದರೂ ಸಾಧ್ಯವಾಗದೆ, ವರನ ಪೋಷಕರು ದೂರ ಉಳಿದರೆ, ವಧುವಿನ ಪೋಷಕರು ಮುಂದೆ ನಿಂತು ಮದುವೆ ಮಾಡಿಸಿದರು.

ಆಂದೋಲನ ಡೆಸ್ಕ್

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

19 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

1 hour ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago