ಬೆಂಗಳೂರು: ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರವಾಗಿ ಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.
ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ರಾಜಮನತನದ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಇದನ್ನು ಮಾನ್ಯ ಮಾಡಿರುವ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರು, ಮುಂದಿನ ಆದೇಶದವರೆಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ತಡೆಯಾಜ್ಞೆ ನೀಡಿದೆ.
ಕಳೆದ ಅಧಿವೇಶನದ ವೇಳೆ ವಿಧಾನಮಂಡಲದ ಉಭಯ ಸದನಗಳಲ್ಲಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆದರೆ ಈ ಕಾಯ್ದೆಯಲ್ಲಿ ಕೆಲವು ನಿಯಮಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿ ರಾಜಮನೆತನವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅರ್ಜಿದಾರರು ದೂರಿದ್ದು, ಅರ್ಜಿದಾರರ ಪರವಾಗಿ ವಕೀಲರಾದ ಮಾನಸಿ ಕುಮಾರ್ ಅವರು ವಾದ ಮಂಡಿಸಿದ್ದರು.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಹೊಸ ಕಾಯ್ದೆಯ ಮೂಲಕ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದೇವಸ್ಥಾನ ಕಟ್ಟಿ ತಲೆ ತಲಾಂತರಗಳಿಂದ ಪೂಜಿಸಿಕೊಂಡು ಬಂದ ಒಡೆಯರ ರಾಜಮನೆತನಕ್ಕೆ ಅನ್ಯಾಯ ಮಾಡಲಾಗಿದೆ. ಈ ಮೂಲಕ ಚಾಮುಂಡೇಶ್ವರಿ ದೇವಾಲಯಕ್ಕೂ ಹಾಗೂ ರಾಜಮನೆತನಕ್ಕೂ ಇರುವ ಸಂಬಂಧ ಕಡಿತಗೊಳಿಸಿ ಎಲ್ಲ ಆಸ್ತಿ, ಪೂಜೆ, ವಿಧಿ ವಿಧಾನ, ಕಾಯ್ದೆ ರಚನೆ ಎಲ್ಲವೂ ಪ್ರಾಧಿಕಾರದ ಪಾಲಾಗಲಿದೆ ಎಂದು ಅರ್ಜಿದಾರರು ಹೈಕೋರ್ಟ್ ಮೂಲಕ ಪ್ರಶ್ನಿಸಿದ್ದರು.
ಸುದೀರ್ಘ ವಾದ ಮಂಡಿಸಿದ ಅರ್ಜಿದಾರರ ಮನವಿ ಸ್ವೀಕರಿಸಿದ ನ್ಯಾಯಾಲಯ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ತಡೆಯಾಜ್ಞೆ ನೀಡಿದ್ದು, ಮುಂದಿನ ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 22 ಕ್ಕೆ ಮುಂದೂಡಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…