ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿರುವ ವಿಷಯಕ್ಕೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಅವರು, ಸೌಜನ್ಯ ಕೊಲೆ ಪ್ರಕರಣ ಕುರಿತು ನ್ಯಾಯಾಲಯದಿಂದಲೂ ತೀರ್ಪು ಬಂದಿದೆ. ನಾನು ಒಂದು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಲಿಕ್ಕೆ ಆಗಲ್ಲ. ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ. ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ. ಧರ್ಮಸ್ಥಳಕ್ಕೆ ಹೋದಾಗ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡುವುದಾಗಿ ಹೇಳಿದರು.
ಅಹವಾಲು ಸ್ವೀಕಾರ: ಕೇಂದ್ರ ಕಾರಾಗೃಹ ಆವರಣದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಅವರು ಹಲವು ಮಹಿಳೆಯರಿಂದ ಮನವಿ ಸ್ವೀಕರಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…