ಎಚ್.ಡಿ.ಕೋಟೆ : ತಾಲ್ಲೂಕಿನ ನಾಗರಹೊಳೆ ಮತ್ತು ವೀರನಹೊಸಳ್ಳಿ ಅರಣ್ಯ ವ್ಯಾಪ್ತಿಯ ಸೊಳ್ಳೇಪುರ ಗ್ರಾಮದ ರೈತ ಶೇಷ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಡೆದಿದೆ.
ಗ್ರಾಮದ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬವರ ಜಮೀನು ಬಳಿ ಶೇಷ ಎಂಬವರ ಹಸು ಮೇಯುತ್ತಿದ್ದಾಗ ಕಾಡಿನಿಂದ ಬಂದ ಹುಲಿ ದಾಳಿ ನಡೆಸಿ ಕೊಂದುಹಾಕಿ, ಹಸುವಿನ ಕೆಲವೊಂದು ಭಾಗವನ್ನು ತಿಂದು ಕಾಡಿಗೆ ಹೋಗಿದೆ. ಇದನ್ನು ಗಮನಿಸಿದ ರೈತರು ಮತ್ತು ಸಾರ್ವಜನಿಕರು ಆತಂಕಗೊಂಡು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಆಗಾಗ್ಗೆ ಮನುಷ್ಯರ ಮೇಲೆ ಮತ್ತು ದನ- ಕರುಗಳು, ಮೇಕೆಯ ಮೇಲೆ ಕಾಡುಪ್ರಾಣಿಗಳು ಮತ್ತು ಹುಲಿಗಳು ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಸೂಕ್ತ ಪರಿಹಾರವನ್ನೂ ನೀಡುತ್ತಿಲ್ಲ. ಇದೇ ರೀತಿ ಮುಂದುವರಿದರೆ ರೈತರ ಜತೆಗೂಡಿ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಈ ಭಾಗದ ಮುಖಂಡರಾದ ಶೇಷ, ಗಣೇಶ್ ನಾಯಕ್ ಮತ್ತು ಕೃಷ್ಣಪುರ ಪರಶಿವಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…