ಮೈಸೂರು

ಶೀಘ್ರದಲ್ಲೇ ಸರ್ಕಾರಿ ಗೋಶಾಲೆ ಕಾರ್ಯ ಆರಂಭ

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ

ಸಂದರ್ಶನ: ನವೀನ್ ಡಿಸೋಜ
ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ.ಎ. ಪ್ರಸನ್ನ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ರಾಜ್ಯದ ೨ನೇ ಸರ್ಕಾರಿ ಗೋಶಾಲೆಯನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ಇನ್ನೂ ಗೋಶಾಲೆ ಕಾರ್ಯಾರಂಭ ವಾಡಿಲ್ಲ. ಈ ಬಗ್ಗೆ ‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ.ಎ. ಪ್ರಸನ್ನ ವಾಹಿತಿ ನೀಡಿದ್ದಾರೆ.

ಪ್ರಶ್ನೆ: ಗೋಶಾಲೆ ಉದ್ಘಾಟನೆಗೊಂಡರೂ ಜಾನುವಾರುಗಳನ್ನು ದಾಖಲಿಸದಿರಲು ಕಾರಣವೇನು?
ಉತ್ತರ: ಕೆ.ನಿಡುಗಣೆ ಗ್ರಾಮದಲ್ಲಿ ಗೋಶಾಲೆಯನ್ನು ಈಗಾಗಲೇ ಉದ್ಘಾಟಿಸಲಾಗಿದೆ. ಆದರೆ, ಈ ಸಮಯದಲ್ಲಿ ಮೇವಿನ ಕೊರತೆ ಇರುವುದರಿಂದ ಸಂಗ್ರಹ ಸಾಧ್ಯವಾಗಿಲ್ಲ. ಇನ್ನು ೮-೧೦ ದಿನಗಳಲ್ಲಿ ಗೋಶಾಲೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಈಗ ೫೦ ಜಾನುವಾರುಗಳಿಗೆ ಮಾತ್ರ ಆಶ್ರಯ ಕಲ್ಪಿಸುವಷ್ಟು ಮೂಲಭೂತ ಸೌಲಭ್ಯವಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಬಿಡಾಡಿ ಜಾನುವಾರುಗಳಿಗೆ ೨ನೇ ಆದ್ಯತೆ ನೀಡಿ ನಂತರ ಮಾಲೀಕರು ಸೇರ್ಪಡೆಗೊಳಿಸುವ ಜಾನುವಾರುಗಳಿಗೆ ಆಶ್ರಯ ಕಲ್ಪಿಸಲು ನಿರ್ಧರಿಸಲಾಗಿದೆ. ಗೋಶಾಲೆಗೆ ಸಿಬ್ಬಂದಿಗಳ ನೇಮಕವಾಗಿಲ್ಲ. ಡಿ ಗ್ರೂಪ್ ನೌಕರರನ್ನು ತಾತ್ಕಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಬೇಕಾಗಿದೆ.

ಪ್ರಶ್ನೆ: ಜಿಲ್ಲೆಯಲ್ಲಿ ಬಿಡಾಡಿ ಜಾನುವಾರುಗಳಿಂದ ಸಾಕಷ್ಟು ಸಮಸ್ಯೆಯುoಟಾಗುತ್ತಿದೆ. ೫೦ ಜಾನುವಾರುಗಳಿಗೆ ಆಶ್ರಯ ಕಲ್ಪಿಸಿದರೆ ಸಮಸ್ಯೆ ಬಗೆಹರಿಯುತ್ತದೆಯೇ

ಉತ್ತರ: ಪ್ರಸ್ತುತ ೨ ಎಕರೆ ಜಾಗದಲ್ಲಿ ಸರ್ಕಾರಿ ಗೋಶಾಲೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ೮ ಎಕರೆಗೆ ವಿಸ್ತರಿಸುವ ಚಿಂತನೆ ಇದೆ. ಈಗ ಕೊಟ್ಟಿಗೆಯಲ್ಲಿ ಸಾಕಲು ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಫೆನ್ಸ್ ಹಾಕಿ ಹೊರಗೆ ಬಿಡುವ ಮೂಲಕ ಗೋಶಾಲೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಪ್ರಶ್ನೆ: ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎಷ್ಟಿದೆ?
ಉತ್ತರ: ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಸಾಕಷ್ಟಿದೆ. ಶೇ.೩೦ರಷ್ಟು ಸಿಬ್ಬಂದಿಗಳು ವಾತ್ರ ಕಾರ್ಯನಿರ್ವಹಿಸುತ್ತಿದ್ದು, ಶೇ.೭೦ರಷ್ಟು ಸಿಬ್ಬಂದಿಗಳ ಕೊರತೆಯ ನಡುವೆ ಕೆಲಸ ವಾಡಬೇಕಾದ ಪರಿಸ್ಥಿತಿ ಇದೆ. ಇಲಾಖೆುಂಲ್ಲಿ ೭೩ ಸಂಸ್ಥೆಗಳಿದ್ದು, ೪೮ ಸಂಸ್ಥೆಗಳಲ್ಲಿ ವೈದ್ಯರು ಇರಬೇಕಾಗಿತ್ತು. ಆದರೆ, ೨೧ ಸಂಸ್ಥೆಗಳಲ್ಲಿ ವಾತ್ರ ವೈದ್ಯರಿದ್ದಾರೆ. ಒಬ್ಬ ವೈದ್ಯರು ೨-೩ ಸಂಸ್ಥೆಗಳನ್ನು ನೋಡಿಕೊಳ್ಳಬೇಕಾದ ಪರಿಸ್ಥಿತಿ ಇದೆ.
ಪ್ರಶ್ನೆ: ಜಿಲ್ಲೆಯಲ್ಲಿ ಇತರ ಪ್ರಾಣಿ ಸಂಬಂಧಿತ ರೋಗಗಳ ಭೀತಿ ಇದೆೆಯೇ?
ಉತ್ತರ: ಇತ್ತಿಚೆಗೆ ಕೇರಳ ರಾಜ್ಯದ ಹಂದಿಗಳಲ್ಲಿ ಜ್ವರ ಕಾಣಿಸಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ, ಸದ್ಯ ಆ ರೋಗವೂ ಕಡಿಮೆಯಾಗಿರುವುದರಿಂದ ಸಮಸ್ಯೆಯಿಲ್ಲ. ಜಿಲ್ಲೆಯ ಕೆಲವು ಭಾಗಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದಿರುವುದರಿಂದ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೆಲವು ವರದಿಗಳು ನೆಗೆಟಿವ್ ಬಂದಿದ್ದು, ಇನ್ನು ಕೆಲವು ವರದಿಗಳು ಬರಬೇಕಿದೆ. ಸದ್ಯ ಆತಂಕ ಪಡುವಂತಹ ಯಾವ  ಪ್ರಕರಣಗಳೂ ಇಲ್ಲ.
ಪ್ರಶ್ನೆ: ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಯಾವುದಾದರೂ ಅಭಿಯಾನ ನಡೆಯುತ್ತಿದೆಯೇ   ?
ಉತ್ತರ: ಸೆ.೧ರಿಂದ ೧೫ರವರೆಗೆ ರೇಬೀಸ್ ಹಾಗೂ ಪ್ರಾಣಿ ಸಂಬಂಧಿತ ಇತರ ರೋಗಗಳ ಬಗ್ಗೆ ವಾಹಿತಿ ಶಿಬಿರವನ್ನು ಪ್ರೌಢಶಾಲೆಗಳಲ್ಲಿ ಆಯೋಜಿಸಲಾಗಿದೆ. ಸೆ.೧೫ರಿಂದ ೩೦ರವರೆಗೆ ಉಚಿತ ಆ್ಯಂಟಿ ರೇಬೀಸ್ ಅಭಿಯಾನ ಮೂಲಕ ಸುವಾರು ೧೦,೫೦೦ ಶ್ವಾನಗಳಿಗೆ ಜಿಲ್ಲೆಯಾದ್ಯಂತ ಲಸಿಕೆ ಹಾಕಲಾಗಿದೆ. ೫ ತಾಲ್ಲೂಕುಗಳಲ್ಲೂ ಈ ಅಭಿಯಾನ ನಡೆಸಲಾಗಿದೆ.

ಪ್ರಶ್ನೆ: ಕೊಡಗು ಜಿಲ್ಲೆಯಲ್ಲಿ ಚರ್ಮಗಂಟು ರೋಗ ಪತ್ತೆಯಾಗಿದೆಯೇ?
ಉತ್ತರ: ಚರ್ಮಗಂಟು ರೋಗ ಸದ್ಯ ಕೊಡಗು ಜಿಲ್ಲೆಯಲ್ಲಿ ಇಲ್ಲ. ಜಿಲ್ಲೆಯಲ್ಲಿ ರೋಗ ಹರಡುವ ಸಾಧ್ಯತೆ ಕಡಿಮೆ ಇದೆ. ಬೇರೆ ಕಡೆಗಳಲ್ಲಿ ಜಾತ್ರೆಗಳು ಹೆಚ್ಚಾಗಿ ನಡೆಯುವುದರಿಂದ ರೋಗ ಹರಡುತ್ತದೆ. ನಮ್ಮಲ್ಲಿ ಜಾತ್ರೆಯಂತಹ ಜಾನುವಾರುಗಳು ಸೇರುವಂತಹ ಕಾರ್ಯಕ್ರಮ ಕಡಿಮೆ ಇರುವುದರಿಂದ ರೋಗ ಹರಡುವ ಸಾಧ್ಯತೆ ಇಲ್ಲ. ಆದರೂ ಪಕ್ಕದ ಜಿಲ್ಲೆಗಳಲ್ಲಿ ರೋಗ ಪತ್ತೆಯಾಗಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ.

andolanait

Recent Posts

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

31 mins ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

50 mins ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

2 hours ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

3 hours ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

3 hours ago

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…

3 hours ago