ಮೈಸೂರು

ಶೀಘ್ರದಲ್ಲೇ ಸರ್ಕಾರಿ ಗೋಶಾಲೆ ಕಾರ್ಯ ಆರಂಭ

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ

ಸಂದರ್ಶನ: ನವೀನ್ ಡಿಸೋಜ
ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ.ಎ. ಪ್ರಸನ್ನ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ರಾಜ್ಯದ ೨ನೇ ಸರ್ಕಾರಿ ಗೋಶಾಲೆಯನ್ನು ಇತ್ತೀಚೆಗೆ ಉದ್ಘಾಟಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ಇನ್ನೂ ಗೋಶಾಲೆ ಕಾರ್ಯಾರಂಭ ವಾಡಿಲ್ಲ. ಈ ಬಗ್ಗೆ ‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ.ಎ. ಪ್ರಸನ್ನ ವಾಹಿತಿ ನೀಡಿದ್ದಾರೆ.

ಪ್ರಶ್ನೆ: ಗೋಶಾಲೆ ಉದ್ಘಾಟನೆಗೊಂಡರೂ ಜಾನುವಾರುಗಳನ್ನು ದಾಖಲಿಸದಿರಲು ಕಾರಣವೇನು?
ಉತ್ತರ: ಕೆ.ನಿಡುಗಣೆ ಗ್ರಾಮದಲ್ಲಿ ಗೋಶಾಲೆಯನ್ನು ಈಗಾಗಲೇ ಉದ್ಘಾಟಿಸಲಾಗಿದೆ. ಆದರೆ, ಈ ಸಮಯದಲ್ಲಿ ಮೇವಿನ ಕೊರತೆ ಇರುವುದರಿಂದ ಸಂಗ್ರಹ ಸಾಧ್ಯವಾಗಿಲ್ಲ. ಇನ್ನು ೮-೧೦ ದಿನಗಳಲ್ಲಿ ಗೋಶಾಲೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಈಗ ೫೦ ಜಾನುವಾರುಗಳಿಗೆ ಮಾತ್ರ ಆಶ್ರಯ ಕಲ್ಪಿಸುವಷ್ಟು ಮೂಲಭೂತ ಸೌಲಭ್ಯವಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಬಿಡಾಡಿ ಜಾನುವಾರುಗಳಿಗೆ ೨ನೇ ಆದ್ಯತೆ ನೀಡಿ ನಂತರ ಮಾಲೀಕರು ಸೇರ್ಪಡೆಗೊಳಿಸುವ ಜಾನುವಾರುಗಳಿಗೆ ಆಶ್ರಯ ಕಲ್ಪಿಸಲು ನಿರ್ಧರಿಸಲಾಗಿದೆ. ಗೋಶಾಲೆಗೆ ಸಿಬ್ಬಂದಿಗಳ ನೇಮಕವಾಗಿಲ್ಲ. ಡಿ ಗ್ರೂಪ್ ನೌಕರರನ್ನು ತಾತ್ಕಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಬೇಕಾಗಿದೆ.

ಪ್ರಶ್ನೆ: ಜಿಲ್ಲೆಯಲ್ಲಿ ಬಿಡಾಡಿ ಜಾನುವಾರುಗಳಿಂದ ಸಾಕಷ್ಟು ಸಮಸ್ಯೆಯುoಟಾಗುತ್ತಿದೆ. ೫೦ ಜಾನುವಾರುಗಳಿಗೆ ಆಶ್ರಯ ಕಲ್ಪಿಸಿದರೆ ಸಮಸ್ಯೆ ಬಗೆಹರಿಯುತ್ತದೆಯೇ

ಉತ್ತರ: ಪ್ರಸ್ತುತ ೨ ಎಕರೆ ಜಾಗದಲ್ಲಿ ಸರ್ಕಾರಿ ಗೋಶಾಲೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ೮ ಎಕರೆಗೆ ವಿಸ್ತರಿಸುವ ಚಿಂತನೆ ಇದೆ. ಈಗ ಕೊಟ್ಟಿಗೆಯಲ್ಲಿ ಸಾಕಲು ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಫೆನ್ಸ್ ಹಾಕಿ ಹೊರಗೆ ಬಿಡುವ ಮೂಲಕ ಗೋಶಾಲೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಪ್ರಶ್ನೆ: ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎಷ್ಟಿದೆ?
ಉತ್ತರ: ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಸಾಕಷ್ಟಿದೆ. ಶೇ.೩೦ರಷ್ಟು ಸಿಬ್ಬಂದಿಗಳು ವಾತ್ರ ಕಾರ್ಯನಿರ್ವಹಿಸುತ್ತಿದ್ದು, ಶೇ.೭೦ರಷ್ಟು ಸಿಬ್ಬಂದಿಗಳ ಕೊರತೆಯ ನಡುವೆ ಕೆಲಸ ವಾಡಬೇಕಾದ ಪರಿಸ್ಥಿತಿ ಇದೆ. ಇಲಾಖೆುಂಲ್ಲಿ ೭೩ ಸಂಸ್ಥೆಗಳಿದ್ದು, ೪೮ ಸಂಸ್ಥೆಗಳಲ್ಲಿ ವೈದ್ಯರು ಇರಬೇಕಾಗಿತ್ತು. ಆದರೆ, ೨೧ ಸಂಸ್ಥೆಗಳಲ್ಲಿ ವಾತ್ರ ವೈದ್ಯರಿದ್ದಾರೆ. ಒಬ್ಬ ವೈದ್ಯರು ೨-೩ ಸಂಸ್ಥೆಗಳನ್ನು ನೋಡಿಕೊಳ್ಳಬೇಕಾದ ಪರಿಸ್ಥಿತಿ ಇದೆ.
ಪ್ರಶ್ನೆ: ಜಿಲ್ಲೆಯಲ್ಲಿ ಇತರ ಪ್ರಾಣಿ ಸಂಬಂಧಿತ ರೋಗಗಳ ಭೀತಿ ಇದೆೆಯೇ?
ಉತ್ತರ: ಇತ್ತಿಚೆಗೆ ಕೇರಳ ರಾಜ್ಯದ ಹಂದಿಗಳಲ್ಲಿ ಜ್ವರ ಕಾಣಿಸಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ, ಸದ್ಯ ಆ ರೋಗವೂ ಕಡಿಮೆಯಾಗಿರುವುದರಿಂದ ಸಮಸ್ಯೆಯಿಲ್ಲ. ಜಿಲ್ಲೆಯ ಕೆಲವು ಭಾಗಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದಿರುವುದರಿಂದ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೆಲವು ವರದಿಗಳು ನೆಗೆಟಿವ್ ಬಂದಿದ್ದು, ಇನ್ನು ಕೆಲವು ವರದಿಗಳು ಬರಬೇಕಿದೆ. ಸದ್ಯ ಆತಂಕ ಪಡುವಂತಹ ಯಾವ  ಪ್ರಕರಣಗಳೂ ಇಲ್ಲ.
ಪ್ರಶ್ನೆ: ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಯಾವುದಾದರೂ ಅಭಿಯಾನ ನಡೆಯುತ್ತಿದೆಯೇ   ?
ಉತ್ತರ: ಸೆ.೧ರಿಂದ ೧೫ರವರೆಗೆ ರೇಬೀಸ್ ಹಾಗೂ ಪ್ರಾಣಿ ಸಂಬಂಧಿತ ಇತರ ರೋಗಗಳ ಬಗ್ಗೆ ವಾಹಿತಿ ಶಿಬಿರವನ್ನು ಪ್ರೌಢಶಾಲೆಗಳಲ್ಲಿ ಆಯೋಜಿಸಲಾಗಿದೆ. ಸೆ.೧೫ರಿಂದ ೩೦ರವರೆಗೆ ಉಚಿತ ಆ್ಯಂಟಿ ರೇಬೀಸ್ ಅಭಿಯಾನ ಮೂಲಕ ಸುವಾರು ೧೦,೫೦೦ ಶ್ವಾನಗಳಿಗೆ ಜಿಲ್ಲೆಯಾದ್ಯಂತ ಲಸಿಕೆ ಹಾಕಲಾಗಿದೆ. ೫ ತಾಲ್ಲೂಕುಗಳಲ್ಲೂ ಈ ಅಭಿಯಾನ ನಡೆಸಲಾಗಿದೆ.

ಪ್ರಶ್ನೆ: ಕೊಡಗು ಜಿಲ್ಲೆಯಲ್ಲಿ ಚರ್ಮಗಂಟು ರೋಗ ಪತ್ತೆಯಾಗಿದೆಯೇ?
ಉತ್ತರ: ಚರ್ಮಗಂಟು ರೋಗ ಸದ್ಯ ಕೊಡಗು ಜಿಲ್ಲೆಯಲ್ಲಿ ಇಲ್ಲ. ಜಿಲ್ಲೆಯಲ್ಲಿ ರೋಗ ಹರಡುವ ಸಾಧ್ಯತೆ ಕಡಿಮೆ ಇದೆ. ಬೇರೆ ಕಡೆಗಳಲ್ಲಿ ಜಾತ್ರೆಗಳು ಹೆಚ್ಚಾಗಿ ನಡೆಯುವುದರಿಂದ ರೋಗ ಹರಡುತ್ತದೆ. ನಮ್ಮಲ್ಲಿ ಜಾತ್ರೆಯಂತಹ ಜಾನುವಾರುಗಳು ಸೇರುವಂತಹ ಕಾರ್ಯಕ್ರಮ ಕಡಿಮೆ ಇರುವುದರಿಂದ ರೋಗ ಹರಡುವ ಸಾಧ್ಯತೆ ಇಲ್ಲ. ಆದರೂ ಪಕ್ಕದ ಜಿಲ್ಲೆಗಳಲ್ಲಿ ರೋಗ ಪತ್ತೆಯಾಗಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

56 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

1 hour ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago