ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ.
ಹುಲಿ ದಾಳಿಯಿಂದ ಹಸು ತೀವ್ರವಾಗಿ ಗಾಯಗೊಂಡಿದೆ. ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗೋಪಾಲಯ್ಯ ನೇತೃತ್ವದಲ್ಲಿ ರಸ್ತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣಾ ಪೋಲಿಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಪತ್ತೆಯಾಗಿಲ್ಲ.
ಆರ್ಎಫ್ಒ ನಂದಕುಮಾರ್ ಸ್ಥಳಕ್ಕೆ ಆಗಮಿಸಿ, ಗಾಯಗೊಂಡಿರುವ ಹಸುವಿನ ಚಿಕಿತ್ಸೆಗೆ ಪರಿಹಾರವನ್ನು ನೀಡಲಾಗುವುದು. ಹುಲಿ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…